25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

ಬಳಂಜ: ಬಳಂಜ ಗ್ರಾಮದ ಕಜೆಕೋಡಿ ದರ್ಖಾಸು ನಿವಾಸಿ ರಾಜೇಶ್ ಆಚಾರಿರವರ ಮನೆಯು ಭಾರಿ ಮಳೆಗೆ ಬೀಳುವ ಸ್ಥಿತಿಯಲ್ಲಿತ್ತು. ಇದನ್ನು ಮನಗಂಡ ಸಮಾಜ ಸೇವಕರಾದ ಸತೀಶ್ ದೇವಾಡಿಗರ ನೇತೃತ್ವದಲ್ಲಿ ಯುವ ನಾಯಕರುಗಳಾದ ಪುರಂದರ ಪೂಜಾರಿ ಪೇರಾಜೆ, ಅಶ್ವಿನ್ ಕುಮಾರ್ ಬೊಂಟ್ರೋಟ್ಟು, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳಾದ ದಿನೇಶ್ ಪಿ.ಕೆ, ದೇವಿ ಪ್ರಸಾದ್ ಶೆಟ್ಟಿ,ದೇಜಪ್ಪ ಪೂಜಾರಿ,ರಮನಾಥ್ ಶೆಟ್ಟಿ, ಸಮಾಜಸೇವಕರಾದ ಸದಾನಂದ ಪೂಜಾರಿ ಬೊಂಟ್ರೋಟ್ಟು, ಪಂಚಾಯತ್ ಸದಸ್ಯರಾದ ರವೀಂದ್ರ. ಬಿ.ಅಮೀನ್ , ಪ್ರಶಾಂತ್ ಶೆಟ್ರು ಕಜೆಕೋಡಿ,ಪುರುಷೋತ್ತಮ ಅಚಾರಿ ಅಟ್ಲಾಜೆ,ಪ್ರವೀಣ್ ಪೂಜಾರಿ ಮುಡಯಿಬೆಟ್ಟು, ಸದಾನಂದ ತೋಟದಪಲ್ಕೇ, ಅನ್ವಿತ್ ಕುಮಾರ್ ಮುಡಯಿಬೆಟ್ಟು, ರೂಪಾ ಮುಡಯಿಬೆಟ್ಟು,ತುಳಸಿ ಅಟ್ಲಾಜೆ, ಪ್ರೇಮಾ ಅಶೋಕ್ ಮುಡಾಯಿಬೆಟ್ಟು ಇವರೆಲ್ಲರ ಸಹಕಾರದಿಂದ ಮನೆಯ ಮಾಡಿಗೆ ಟಾರ್ಪಲ್ ಹಾಕಿ ಮಳೆಯ ನೀರು ಸೊರದಂತೆ ತಕ್ಕ ಮಟ್ಟಿನ ವ್ಯವಸ್ಥೆ ಮಾಡಲಾಗಿದೆ.

ಬಾವಿಯಿಂದ ನೀರು ತೆಗೆಯಲು ವ್ಯವಸ್ಥೆ ಕೂಡ ಇರಲಿಲ್ಲ ಅದಕ್ಕೆ ಬೇಕಾಗುವ ಮರದ ದಿಂಬುನ ವ್ಯವಸ್ಥೆ ಕೂಡ ಮಾಡಲಾಯಿತು. ಮಾನವೀಯ ನೆಲೆಯಲ್ಲಿ ಸಹಕಾರ ಕೊಟ್ಟ ಎಲ್ಲ ಹಿರಿಯರಿಗೆ,ಸಹೋದರ ಸಹೋದರಿಯರಿಗೆ ರಾಜೇಶ್ ಕುಟುಂಬದವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

Related posts

ಬೆಳ್ತಂಗಡಿ: ರೆಂಕೆದಗುತ್ತುನಲ್ಲಿ ಆವರಣ ಗೋಡೆ ಬಿದ್ದು ಹಾನಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದಿತಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟಿನ ನಿಯೋಗ ಮುಂಬಯಿಗೆ ಭೇಟಿ: ಅನ್ನಛತ್ರ ಮತ್ತು ಯಾತ್ರಿ ನಿವಾಸದ ಶಿಲನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಮೂಡುಬಿದಿರೆಗೆ ರಾಜ್ಯ ಮಟ್ಟದಲ್ಲಿ ಎರಡನೇ ಮತ್ತು ನಾಲ್ಕನೇ ರ‍್ಯಾಂಕ್‌ಗಳು

Suddi Udaya

ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ರೋಗಿಗಳ ಸೇವೆಗೆ ಲಭಿಸುತ್ತಿಲ್ಲ : ಪಟ್ಟಣ ಪಂಚಾಯತ್ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರ ಆಕ್ರೋಶ

Suddi Udaya

ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಎ.11: ಕುಡುಮೇರು ಮನೆಯ ವಠಾರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
error: Content is protected !!