ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಮುಂಡಾಜೆ : ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘವನ್ನು ಕೊಳಂಬೆ ಶ್ರೀಮತಿ ಭವಾನಿ ಇವರ ಮನೆಯಲ್ಲಿ ಓಬಯ್ಯಾ ಗೌಡರವರು ಉದ್ಘಾಟಿಸಿದ್ದರು.

ವಲಯದ ಮೇಲ್ವಿಚಾರಕರಾದ ಜನಾರ್ಧನ ಸಂಘದ ನಿಯಮಗಳ ಬಗ್ಗೆ ಮಾಹಿತಿ ನೀಡಿದ್ದರು. ಸಂಘದ ಪ್ರಭಂದಕರಾಗಿ ಶ್ರೀಮತಿ ಭವಾನಿ, ಸಂಯೋಜಕರಾಗಿ ಶ್ರೀಮತಿ ವಿನೋದ ಮತ್ತು ಕೋಶಾಧಿಕಾರಿಯಾಗಿ ಶ್ರೀಮತಿ ಪಾರ್ವತಿ ಇವರನ್ನು ಆಯ್ಕೆ ಮಾಡಲಾಯಿತು. ಸೇವಾಪ್ರತಿನಿಧಿ ಚೇತನಾ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!