38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಕೃಷಿ ಹಾನಿ

ಮೊಗ್ರು : ಜು 30 ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಸ್ಥಾನದ ಹಿಂಭಾಗದ ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದ ಸುಮಾರು 20 ಮನೆಯವರ ತೋಟಕ್ಕೆ ಸತತವಾಗಿ 15 ದಿನಗಳಿಂದ ಸುರಿದ ವಿಪರೀತ ಮಳೆಯಿಂದಾಗಿ ನೇತ್ರಾವತಿ ನದಿ ಸಂಪರ್ಕದ ತೋಡಿನ ನೀರು ಮತ್ತು ಕೆಸರು ಮಣ್ಣು ತೋಟಕ್ಕೆ ನುಗ್ಗಿ ಅಡಿಕೆ, ತೆಂಗು ಇನ್ನಿತರ ಬೆಳೆಗಳ ಸ್ಥಿತಿಯ ಬಗ್ಗೆ ಆ ಭಾಗದ ಕೃಷಿಕರು ಆತಂಕ ದಲ್ಲಿದ್ದು ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ತೋಟದ ಮೇಲ್ಬಾಗದಲ್ಲಿ ಸಂಪೂರ್ಣ ಕೆಸರು ಮಣ್ಣು ನಿಂತು ಕೃಷಿಕರಿಗೆ ಭಯ ಭೀತಿ ಉಂಟಾಗಿದೆ.
ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಂಗಾಧರ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ಭೇಟಿ ಮಾಹಿತಿ ಪಡೆದುಕೊಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.


2019 ನೇ ಇಸವಿಯಲ್ಲಿ ಈ ಭಾಗದ ಕೃಷಿಕರಿಗೆ ಇದೇ ರೀತಿಯ ವಾತಾವರಣ ನಿರ್ಮಾಣವಾಗಿತ್ತು, ಪರಿಹಾರ ಪಡೆಯುವಲ್ಲಿ ವಂಚಿತರಾಗಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಪರಿಹಾರ ನೀಡಬೇಕಾಗಿ ಆತಂಕದಲ್ಲಿರುವ ಕೃಷಿಕರ ಒಕ್ಕೊರಲ ಆಗ್ರಹವಾಗಿದೆ.

Related posts

ಗುರುವಾಯನಕೆರೆಯ ಕಂದಡಿಗುಡ್ಡೆ ನಿವಾಸಿ ಶ್ರೀಮತಿ ಲೀಲಾವತಿ ನಿಧನ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹಸಂಸ್ಥೆ ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಹಾಗೂ ರಾಜ್ಯ ಸದಸ್ಯರಾಗಿ ಅನಿಲ್ ಕುಮಾರ್ ಯು ಆಯ್ಕೆ

Suddi Udaya

ಇಂದಬೆಟ್ಟು: ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ರಾಷ್ಟ್ರ ಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ : ಕುತ್ಲೂರು ಗ್ರಾಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!