ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya

ಬೆಳ್ತಂಗಡಿ:ಧಾರಕಾರವಾಗಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ನದಿಯ ನೀರು ಅಪಾಯಕಾರಿ ಮಟ್ಟ ಏರಿದ್ದು ಸುತ್ತಮುತ್ತಲಿನ ಮನೆಗಳಿಗೆ ನೀರು ತುಂಬಿದೆ.

ಹಲವಾರು ಕಡೆಗಳಲ್ಲಿ ಗುಡ್ಡ ಕುಸಿತ, ವಿದ್ಯುತ್ ಕಂಬ ಬಿದ್ದಿದೆ ಮತ್ತು ಮನೆಗಳಿಗೆ ಹಾನಿಯಾಗಿದ್ದು ಸುತ್ತಮುತ್ತಲಿನ ಜನಗಳನ್ನು ಸ್ಥಳಾಂತರಿಸಲಾಗಿದೆ.

ಈ ಬಗ್ಗೆ ಲಾಯಿಲ ಗ್ರಾಮ‌ ಪಂಚಾಯತ್ ಆಡಳಿತ ವರ್ಗ, ಅಧಿಕಾರಿಗಳು ಸ್ಥಳ ಪರಿಶೀಲಿಸಿ ಸುರಕ್ಷಿತ ಸ್ಥಳಗಳಿಗೆ ಜನರನ್ನು ಸ್ಥಳಾಂತಿರಿಸಿದ್ದಾರೆ.

Leave a Comment

error: Content is protected !!