23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಟ್ಯೆಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ನಡೆದ ಆಟಿಡೊಂಜಿ ದಿನ ವಿಶೇಷ ಉಪನ್ಯಾಸ ನೀಡಿದ ಡಾ.ರವೀಶ್ ಪಡುಮಲೆಯವರು ಹಿಂದಿನ ನಮ್ಮ ಹಿರಿಯ ಕಷ್ಟದ ಬದುಕನ್ನು ಇಂದು ನಾವು ಆಟಿಡೊಂಜಿ ದಿನದ ಮೂಲಕ ನೆನಪು ಮಾಡಿಕೊಳ್ಳುತ್ತಿದ್ದೇವೆ. ತುಳುನಾಡಿನ ಆಚಾರ ವಿಚಾರಗಳ ಜೊತೆಗೆ ನಮ್ಮ ಸಂಸ್ಕೃತಿಯನ್ನು ಉಳಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ನಮ್ಮ ವೃತ್ತಿ ಜೀವನದ ಗೌರವದೊಂದಿಗೆ ನಮ್ಮ ಕಿರಿಯರಿಗೆ ನಾಡಿನ ಆಚಾರ-ವಿಚಾರಗಳನ್ನು ಮನವರಿಕೆ ಮಾಡುವುದು, ಸ್ವಸ್ಥ ಸಮಾಜದ ನಿರ್ಮಾಣ ಮತ್ತು ಉಳಿಸುವುದು ನಮ್ಮ ಕರ್ತವ್ಯ ಎಂದರು.

ಈ ಸಂದರ್ಭದಲ್ಲಿ ಡಾ.ರವೀಶ್ ಪಡುಮಲೆಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ವೇದಾವತಿ , ಜಯಂತ್ ಉರ್ಲಾಂಡಿ, ಶಾಂಭವಿ ಪಿ ಬಂಗೇರ, ಜಯಲಾಕ್ಷ, ಕುಶಾಲಪ್ಪ ಗೌಡ, ನಾಗೇಶ್ ಉಜಿರೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಆಟಿ ತಿಂಡಿ ತಿನಿಸುಗಳೊಂದಿಗೆ ಟೈಲರ್ಸ್ ವೃತ್ತಿ ಭಾಂದವರು ಸಹ ಭೋಜನದಲ್ಲಿ ಭಾಗಿಯಾದರು.

Related posts

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆಯ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಪರೀಕ್ಷಾ ತಯಾರಿಯ ಧನಾತ್ಮಕ ಮಾರ್ಗಗಳ ಕಾರ್ಯಾಗಾರ

Suddi Udaya

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

Suddi Udaya

ಉಜಿರೆ ಮಲ ತ್ಯಾಜ್ಯ ಘಟಕದ ಬಗ್ಗೆ ಕೇಂದ್ರ ಸಚಿವರ ಸಂವಾದ

Suddi Udaya

ಬಂಗಾಡಿ ಸರಕಾರಿ ಪ್ರೌಢಶಾಲೆಗೆ ಶೇ.98 ಫಲಿತಾಂಶ

Suddi Udaya
error: Content is protected !!