ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ: ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ಜನರು, ವಾಹನ ಸವಾರರು ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ರಸ್ತೆ ಉಜಿರೆ ಮತ್ತು ಕೊಯ್ಯೂರು ಗ್ರಾಮ‌ ಪಂಚಾಯತ್ ವ್ಯಾಪ್ತಿಗೆ ಬರುತ್ತಿದ್ದು ಕಳೆದ ಕೆಲ ಸಮಯದಿಂದ ಈ ರಸ್ತೆ ತೀರ ಹದೆಗೆಟ್ಟಿದೆ.ಈ ಭಾಗದಲ್ಲಿ ನೂರಾರು ಮನೆಗಳಿದ್ದು ದಿನನಿತ್ಯ ವಿದ್ಯಾರ್ಥಿಗಳು ಶಾಲೆಗೆ ಹೋಗಲು, ಉದ್ಯೋಗಸ್ಥರು, ಇತರ ವ್ಯವಸ್ಥೆಗೆ ಬೆಳ್ತಂಗಡಿಗೆ ಸಾಗಲು ಈ ರಸ್ತೆಯನ್ನು ಅವಲಂಬಿಸಿದ್ದು ಕೆಸರು, ಮಣ್ಣು ತುಂಬಿ ನಡೆದಾಡಲು ಸಾಧ್ಯವಾಗದ ಪರಿಸ್ಥಿತಿಯಾಗಿದೆ.

ಈ ರಸ್ತೆಯನ್ನು ಶೀಘ್ರವಾಗಿ ಸರಿಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.

Leave a Comment

error: Content is protected !!