26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

ಬೆಳ್ತಂಗಡಿ : ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊ ಜು.28ರಂದು ಡಾ. ಬಿ. ಆರ್. ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ತುಳುನಾಡು ಒಕ್ಕೂಟ ಸಂಘಟನೆಯ ವತಿಯಿಂದ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುತ್ತೊಟ್ಟು ಫಿನ್ ಕಾರ್ಪ್ ಮೂಡಬಿದ್ರೆ ಶಾಖೆಯ ಸೀನಿಯರ್ ಮ್ಯಾನೇಜರ್ ಶ್ರೀಮತಿ ಮಲ್ಲಿಕಾ ಪುನೀತ್ ಇವರು ಮಾತನಾಡಿ ತುಳುನಾಡಿನ ಪಾರಂಪರಿಕ ಆಚರಣೆಗಳನ್ನು ಉಳಿಸಿ ಬೆಳೆಸುವುದು ಎಲ್ಲಾ ತುಳುವರ ಕರ್ತವ್ಯವಾಗಿದೆ. ಮಕ್ಕಳಿಗೆ ಪಾರಂಪರಿಕ ಚೆನ್ನೆಮಣೆ ಆಟವನ್ನು ಕಲಿಸುವುದು ಅಗತ್ಯವಾಗಿದೆ ಎಂದು ತಿಳಿಸಿದರು.


ಮುಖ್ಯ ಅತಿಥಿಗಳಾಗಿ ತುಳು ನಾಟಕ ರಚನೆಕಾರ ಮತ್ತು ರಂಗನಿರ್ದೇಶಕ ವಿ. ಎನ್. ಕುಲಾಲ್ ವೇಣೂರು, ವಕೀಲರಾದ ಅನಿಲ್ ಕುಮಾರ್ ಯು., ರಾಜೀವ್ ಕಕ್ಕೆ ಪದವು, ಜಯಾನಂದ ಬಂಗೇರ ಕುವೆತ್ಯಾರು ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿದ್ದರು. ತುಳುನಾಡ್ ಒಕ್ಕೂಟ ಸಂಘಟನೆಯ ಉಪಾಧ್ಯಕ್ಷರಾದ ನವೀನ್ ಪೂಜಾರಿ ಅಡ್ಕದಬೈಲು, ತುಳುನಾಡ್ ಒಕ್ಕೂಟ ಸಂಘಟನೆಯ ಜಿಲ್ಲಾಧ್ಯಕ್ಷರಾದ ಉದಯ ಗೋಳಿಯಂಗಡಿ ಗೌರವ ಉಪಸ್ಥಿತರಿದ್ದರು. ತುಳುನಾಡ್ ಒಕ್ಕೂಟ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ರಾಜೇಶ್ ಕುಲಾಲ್ ಬೈರೊಟ್ಟು ಅಧ್ಯಕ್ಷತೆ ವಹಿಸಿದ್ದರು.


ಬೆಳಿಗ್ಗೆಯಿಂದ ನಡೆದ ಸಂಧಿ ಪಾರ್ದನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಶ್ರೀಮತಿ ಹೊನ್ನಮ್ಮ, ಎರಡನೇ ಬಹುಮಾನ ಅವನಿ, ಮೂರನೇ ಬಹುಮಾನ ಶಿಫಾನಿ ಪಡೆದರು.

ಚೆನ್ನೆಮಣೆ ಆಟದ ಕಿರಿಯರ ವಿಭಾಗದಲ್ಲಿ ಪ್ರಥಮ ಬಹುಮಾನ ಅವನಿ, ಎರಡನೇ ಬಹುಮಾನ ಶಿವಾಣಿ, ಮೂರನೇ ಬಹುಮಾನ ಸುಪ್ರಿತಾ ರಾವ್, ನಾಲ್ಕನೇ ಬಹುಮಾನ ಶ್ರಾವ್ಯ ಪಡೆದರು.

ಚೆನ್ನೆಮಣೆ ಆಟದ ಹಿರಿಯರ ವಿಭಾಗದಲ್ಲಿ ಪ್ರಥಮ ಬಹುಮಾನ ಸಂಜೀವ, ಎರಡನೇ ಬಹುಮಾನ ಪ್ರವೀಣ್, ಮೂರನೇ ಬಹುಮಾನ ಜಿ. ವಿ. ಹರೀಶ್ ಸವಣಾಲು ಮತ್ತು ಮನೋಹರ್ ಜಂಟಿಯಾಗಿ ಪಡೆದರು. ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ಸಮಾರೋಪ ಸಮಾರಂಭದಲ್ಲಿ ನೀಡಲಾಯಿತು. ರಮೇಶ್ ಸಾಲಿಯಾನ್ ಅರಳಿ ಸ್ವಾಗತಿಸಿ, ಆಕಾಶ್ ಪೂಜಾರಿ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

Suddi Udaya

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ : ಅಪಾರ ನಷ್ಟ

Suddi Udaya

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

Suddi Udaya
error: Content is protected !!