ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ತಣ್ಣೀರುಪಂತ : ತಣ್ಣೀರುಪಂತ ಗ್ರಾ.ಪಂ.ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷರಾದ ಹೇಮಾವತಿ ಇವರ ಅಧ್ಯಕ್ಷತೆಯಲ್ಲಿ ಬಾಪೂಜಿ ಸೇವಾ ಕೇಂದ್ರ ಕಲ್ಲೇರಿಯಲ್ಲಿ ಜು. 30ರಂದು ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶೇಷಾಗಿರಿ ವಹಿಸಿದರು. ವರದಿ ಮತ್ತು ಲೆಕ್ಕ ಪತ್ರ ಯನ್ನು ಅಭಿವೃದ್ಧಿ ಅಧಿಕಾರಿ ಶ್ರವಣ್ ಕುಮಾರ್ ಸಭೆಗೆ ಮಂಡಿಸಿದರು.

ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಪಂಚಾಯತ್ ಇಂಜಿನಿಯರ್ ಉಪ ವಿಭಾಗ , ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆಯವರು ಉಪಸ್ಥಿತರಿದ್ದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಪ್ರಿಯಾ ಮತ್ತು ಗ್ರಾ.ಪಂ ಸದಸ್ಯರು, ಪಂ. ಅಭಿವೃದ್ಧಿ ಅಧಿಕಾರಿ ಶ್ರವಣ್ ಕುಮಾರ್ ಹಾಗೂ ಗ್ರಾಮಸ್ಥರು, ಸಿಬ್ಬಂದಿ ವರ್ಗದರು ಉಪಸ್ಥಿತರಿದ್ದರು.

Leave a Comment

error: Content is protected !!