September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

ಬಳಂಜ: ಬಳಂಜ ಗ್ರಾಮದ ಕಜೆಕೋಡಿ ದರ್ಖಾಸು ನಿವಾಸಿ ರಾಜೇಶ್ ಆಚಾರಿರವರ ಮನೆಯು ಭಾರಿ ಮಳೆಗೆ ಬೀಳುವ ಸ್ಥಿತಿಯಲ್ಲಿತ್ತು. ಇದನ್ನು ಮನಗಂಡ ಸಮಾಜ ಸೇವಕರಾದ ಸತೀಶ್ ದೇವಾಡಿಗರ ನೇತೃತ್ವದಲ್ಲಿ ಯುವ ನಾಯಕರುಗಳಾದ ಪುರಂದರ ಪೂಜಾರಿ ಪೇರಾಜೆ, ಅಶ್ವಿನ್ ಕುಮಾರ್ ಬೊಂಟ್ರೋಟ್ಟು, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳಾದ ದಿನೇಶ್ ಪಿ.ಕೆ, ದೇವಿ ಪ್ರಸಾದ್ ಶೆಟ್ಟಿ,ದೇಜಪ್ಪ ಪೂಜಾರಿ,ರಮನಾಥ್ ಶೆಟ್ಟಿ, ಸಮಾಜಸೇವಕರಾದ ಸದಾನಂದ ಪೂಜಾರಿ ಬೊಂಟ್ರೋಟ್ಟು, ಪಂಚಾಯತ್ ಸದಸ್ಯರಾದ ರವೀಂದ್ರ. ಬಿ.ಅಮೀನ್ , ಪ್ರಶಾಂತ್ ಶೆಟ್ರು ಕಜೆಕೋಡಿ,ಪುರುಷೋತ್ತಮ ಅಚಾರಿ ಅಟ್ಲಾಜೆ,ಪ್ರವೀಣ್ ಪೂಜಾರಿ ಮುಡಯಿಬೆಟ್ಟು, ಸದಾನಂದ ತೋಟದಪಲ್ಕೇ, ಅನ್ವಿತ್ ಕುಮಾರ್ ಮುಡಯಿಬೆಟ್ಟು, ರೂಪಾ ಮುಡಯಿಬೆಟ್ಟು,ತುಳಸಿ ಅಟ್ಲಾಜೆ, ಪ್ರೇಮಾ ಅಶೋಕ್ ಮುಡಾಯಿಬೆಟ್ಟು ಇವರೆಲ್ಲರ ಸಹಕಾರದಿಂದ ಮನೆಯ ಮಾಡಿಗೆ ಟಾರ್ಪಲ್ ಹಾಕಿ ಮಳೆಯ ನೀರು ಸೊರದಂತೆ ತಕ್ಕ ಮಟ್ಟಿನ ವ್ಯವಸ್ಥೆ ಮಾಡಲಾಗಿದೆ.

ಬಾವಿಯಿಂದ ನೀರು ತೆಗೆಯಲು ವ್ಯವಸ್ಥೆ ಕೂಡ ಇರಲಿಲ್ಲ ಅದಕ್ಕೆ ಬೇಕಾಗುವ ಮರದ ದಿಂಬುನ ವ್ಯವಸ್ಥೆ ಕೂಡ ಮಾಡಲಾಯಿತು. ಮಾನವೀಯ ನೆಲೆಯಲ್ಲಿ ಸಹಕಾರ ಕೊಟ್ಟ ಎಲ್ಲ ಹಿರಿಯರಿಗೆ,ಸಹೋದರ ಸಹೋದರಿಯರಿಗೆ ರಾಜೇಶ್ ಕುಟುಂಬದವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

Related posts

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಮುಂಡಾಜೆ ವಲಯದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ

Suddi Udaya

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

Suddi Udaya

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!