25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ.ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ

ಬೆಳ್ತಂಗಡಿ : ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ದರೋಡೆ ಹಾಗೂ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ ಜು.30ರಂದು ಬೆಳ್ತಂಗಡಿ ಮಿನಿ ವಿಧಾನಸೌಧದ ಮುಂಭಾಗ ನಡೆಯಿತು.

ಈ ವೇಳೆ ಮಾತನಾಡಿದ ಶಾಸಕ ಹರೀಶ್ ಪೂಂಜ ಮೊನ್ನೆ ನಡೆದಂತಹ ಘಟನೆಯಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯನ್ನು ಮಾಡುವಂತಂಹ ಗೂಂಡಾಗಳನ್ನು ಕಾಂಗ್ರೆಸ್ ಸರಕಾರ ರಕ್ಷಣೆಕೊಡುತ್ತಿದ್ದು ಈ ರಕ್ಷಣೆ ವಿರುದ್ಧ ಹೋರಾಟವಾಗಿದೆ. ಈ ಘಟನೆಯಲ್ಲಿ ಕ್ರಿಮಿನಲ್ ಮೊಕದ್ದಮೆ ಹೊಂದಿದ್ದವರೆ ಭಾಗಿಯಾಗಿದ್ದು ತಾಲೂಕಿನಲ್ಲಿ ಇಂತಹ ಗೂಂಡಾಗಳಿಗೆ ಸರಿಯಾದ ಶಿಕ್ಷೆಯನ್ನು ಕೊಡಿಸುವಂತಹ ಕೆಲಸ ಪೊಲೀಸ್ ಇಲಾಖೆ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಮಂಡಲ ಪ್ರಧಾನ ಕಾರ್ಯದರ್ಶಿಯಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ಜಿಲ್ಲಾ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾಶ್ರೀನಿವಾಸ , ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಮುಂಡಾಜೆ, ಉಜಿರೆ ಗ್ರಾ.ಪಂ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷೆ ರತ್ನಾವತಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು.. ಸುಂದರ ಹೆಗ್ಡೆ ವೇಣೂರು. ಶಕ್ತಿ ಕೇಂದ್ರದ ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ತೋಟತ್ತಾಡಿ: ಬಾಬು ಗೌಡ ನೇಣುಬಿಗಿದು ಆತ್ಮಹತ್ಯೆ

Suddi Udaya

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಸವಣಾಲು ಬೊಲ್ಲೊಟ್ಟುಗುತ್ತು ನಿವಾಸಿ, ಲಯನ್ಸ್ ಕ್ಲಬ್‌ ಮಾಜಿ ಅಧ್ಯಕ್ಷ ಲ| ಬಿ. ರಘುರಾಮ ಗಾಂಭೀರ ನಿಧನ

Suddi Udaya

ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ಅಣ್ಣಾಮಲೈ ವಿವಿಯಿಂದ ಡಾಕ್ಟರೇಟ್‌ ಪದವಿ

Suddi Udaya

ಪಿಲ್ಯ: ಸದಾಶಿವ ಆಠವಳೆ ನಿಧನ

Suddi Udaya
error: Content is protected !!