25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಕೃಷಿ ಹಾನಿ

ಮೊಗ್ರು : ಜು 30 ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಸ್ಥಾನದ ಹಿಂಭಾಗದ ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದ ಸುಮಾರು 20 ಮನೆಯವರ ತೋಟಕ್ಕೆ ಸತತವಾಗಿ 15 ದಿನಗಳಿಂದ ಸುರಿದ ವಿಪರೀತ ಮಳೆಯಿಂದಾಗಿ ನೇತ್ರಾವತಿ ನದಿ ಸಂಪರ್ಕದ ತೋಡಿನ ನೀರು ಮತ್ತು ಕೆಸರು ಮಣ್ಣು ತೋಟಕ್ಕೆ ನುಗ್ಗಿ ಅಡಿಕೆ, ತೆಂಗು ಇನ್ನಿತರ ಬೆಳೆಗಳ ಸ್ಥಿತಿಯ ಬಗ್ಗೆ ಆ ಭಾಗದ ಕೃಷಿಕರು ಆತಂಕ ದಲ್ಲಿದ್ದು ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ತೋಟದ ಮೇಲ್ಬಾಗದಲ್ಲಿ ಸಂಪೂರ್ಣ ಕೆಸರು ಮಣ್ಣು ನಿಂತು ಕೃಷಿಕರಿಗೆ ಭಯ ಭೀತಿ ಉಂಟಾಗಿದೆ.
ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಂಗಾಧರ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ಭೇಟಿ ಮಾಹಿತಿ ಪಡೆದುಕೊಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.


2019 ನೇ ಇಸವಿಯಲ್ಲಿ ಈ ಭಾಗದ ಕೃಷಿಕರಿಗೆ ಇದೇ ರೀತಿಯ ವಾತಾವರಣ ನಿರ್ಮಾಣವಾಗಿತ್ತು, ಪರಿಹಾರ ಪಡೆಯುವಲ್ಲಿ ವಂಚಿತರಾಗಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಪರಿಹಾರ ನೀಡಬೇಕಾಗಿ ಆತಂಕದಲ್ಲಿರುವ ಕೃಷಿಕರ ಒಕ್ಕೊರಲ ಆಗ್ರಹವಾಗಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ಶಿಪ್

Suddi Udaya

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

Suddi Udaya

ಮರಳಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಯಕ್ಷಭಾರತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ: ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya
error: Content is protected !!