ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಕೃಷಿ ಹಾನಿ

ಮೊಗ್ರು : ಜು 30 ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಸ್ಥಾನದ ಹಿಂಭಾಗದ ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದ ಸುಮಾರು 20 ಮನೆಯವರ ತೋಟಕ್ಕೆ ಸತತವಾಗಿ 15 ದಿನಗಳಿಂದ ಸುರಿದ ವಿಪರೀತ ಮಳೆಯಿಂದಾಗಿ ನೇತ್ರಾವತಿ ನದಿ ಸಂಪರ್ಕದ ತೋಡಿನ ನೀರು ಮತ್ತು ಕೆಸರು ಮಣ್ಣು ತೋಟಕ್ಕೆ ನುಗ್ಗಿ ಅಡಿಕೆ, ತೆಂಗು ಇನ್ನಿತರ ಬೆಳೆಗಳ ಸ್ಥಿತಿಯ ಬಗ್ಗೆ ಆ ಭಾಗದ ಕೃಷಿಕರು ಆತಂಕ ದಲ್ಲಿದ್ದು ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ತೋಟದ ಮೇಲ್ಬಾಗದಲ್ಲಿ ಸಂಪೂರ್ಣ ಕೆಸರು ಮಣ್ಣು ನಿಂತು ಕೃಷಿಕರಿಗೆ ಭಯ ಭೀತಿ ಉಂಟಾಗಿದೆ.
ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಂಗಾಧರ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ಭೇಟಿ ಮಾಹಿತಿ ಪಡೆದುಕೊಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.


2019 ನೇ ಇಸವಿಯಲ್ಲಿ ಈ ಭಾಗದ ಕೃಷಿಕರಿಗೆ ಇದೇ ರೀತಿಯ ವಾತಾವರಣ ನಿರ್ಮಾಣವಾಗಿತ್ತು, ಪರಿಹಾರ ಪಡೆಯುವಲ್ಲಿ ವಂಚಿತರಾಗಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಪರಿಹಾರ ನೀಡಬೇಕಾಗಿ ಆತಂಕದಲ್ಲಿರುವ ಕೃಷಿಕರ ಒಕ್ಕೊರಲ ಆಗ್ರಹವಾಗಿದೆ.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷರ ಭೇಟಿ; ಪ್ರತಿಭಾ ಪುರಸ್ಕಾರ

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

Suddi Udaya
error: Content is protected !!