July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

ಬಾರ್ಯ : ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಗುಡ್ಡೆ ಕುಸಿದ ಕಾರಣ ಸಂಪೂರ್ಣ ಬಂದ್ ಆಗಿದೆ.
ಬಾರ್ಯ ಗ್ರಾಮದ ಪಂಜುಕ್ಕು ಎಂಬಲ್ಲಿ ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡೆ ಕುಸಿದು ಬಿದ್ದ ಕಾರಣ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಬದಲಿ ರಸ್ತೆಯನ್ನು ಪ್ರಯಾಣಿಕರು ಬಳಸುತ್ತಿದ್ದಾರೆ.

ಪಂಜುಕ್ಕು ಪ್ರಯಾಣಿಕರ ತಂಗುದಾಣದ ಬಳಿಯೇ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣಕ್ಕೆ ಯಾವುದೇ ಹಾನಿಯಾಗಿಲ್ಲ.
ಗುಡ್ಡ ಕುಸಿತದಿಂದ ವಿದ್ಯುತ್ ಕಂಬಗಳು ಧರೆಗುಳಿದಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಉಪ್ಪಿನಂಗಡಿ, ಪುತ್ತೂರು, ಬಿ.ಸಿರೋಡು ತೆರಳುವ ಪ್ರಯಣಿಕರು ಬದಲಿ ರಸ್ತೆ ಬಳಸುವಂತೆ ಸೂಚಿಸಲಾಗಿದೆ.

Related posts

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

Suddi Udaya

ಸೆ.14 : ವಿದ್ಯುತ್ ನಿಲುಗಡೆ

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಮರೋಡಿ ಶ್ರೀ ಬ್ರಹ್ಮಲಿಂಗೇಶ್ವರ ತಂಡವು ಪ್ರಥಮ

Suddi Udaya

ಮರಿಯಾಂಬಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya
error: Content is protected !!