ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya

ಕೊಕ್ಕಡ: ಕೊಕ್ಕಡ ಗ್ರಾ.ಪಂ ನ ತ್ರೈಮಾಸಿಕ ಕೆ.ಡಿ.ಪಿ ಸಭೆಯು ಗ್ರಾ.ಪಂ. ಅಧ್ಯಕ್ಷೆ ಬೇಬಿರವರ ಅಧ್ಯಕ್ಷತೆಯಲ್ಲಿ ಜು.31ರಂದು ಗ್ರಾ.ಪಂ ಸಭಾಭವನದಲ್ಲಿ ನಡೆಯಿತು.

ಈ ವೇಳೆ 19 ಇಲಾಖೆಯ ಅಧಿಕಾರಿಗಳು ಭಾಗವಹಿಸಬೇಕಿದ್ದ ಕೆ.ಡಿ.ಪಿ ಸಭೆಯಲ್ಲಿ ಎರಡು ಇಲಾಖೆಗಳಾದ ಪಶುಸಂಗೋಪನಾ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಾತ್ರ ಭಾಗವಹಿಸಿದ್ದು, ಸಭೆಗೆ ಬಾರದ ಉಳಿದ ಇಲಾಖೆಗಳಿಗೆ ನೋಟಿಸ್ ನ್ನು ನೀಡುವುದಾಗಿ ನಿರ್ಣಯಿಸಿ ಕೆ.ಡಿ.ಪಿ ಸಭೆಯನ್ನು ರದ್ದುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಭಾರತಿ, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!