26.1 C
ಪುತ್ತೂರು, ಬೆಳ್ತಂಗಡಿ
September 11, 2026
ಸಮಸ್ಯೆ

ಗುರುವಾಯನ ಕೆರೆ ಮಳೆಯ ಆರ್ಭಟ ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲಿ ಹರಿದ ನೀರು ವಾಹನ ಸವಾರರ ಪರದಾಟ

ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲಿ ಹರಿದು ಬಂಟರ ಭವನ‌ದ ಹತ್ತಿರ ನೀರು ನಿಂತು ನದಿಯಂತಾಗಿದೆ. ಜೈನ್ ಪೇಟೆಯ ಕೆಲವು ಮನೆಗಳು ಜಲಾವೃತಗೊಂಡಿದೆ ಹಾಗೂ ಮಸೀದಿ ಬಳಿ ಕುಸಿತವಾದ ಘಟನೆ ಸಂಭವಿಸಿದೆ.

ಇಂದು ಸಂಜೆ ಸುರಿದ ಭಾರಿ ಮಳೆಗೆ ಗುರುವಾಯನಕೆರೆ ಪೇಟೆಯ ಎಲ್ಲಾ ನೀರು ಬಂಟರ ಭವನದ ಹತ್ತಿರ ರಸ್ತೆಯಲ್ಲಿ ಶೇಖರಣೆಯಾಗಿ ನದಿಯಂತಾಗಿದೆ. ಪರಿಣಾಮ‌ ವಾಹನ ಸವಾರರು ಹೋಗಲಾಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅತ್ತ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಈ ಸಮಸ್ಯೆ ಎದುರಾಗಿದೆ ಎಂದು ವಾಹನ ಸವಾರರು ಹಿಡಿಶಾಪ ಹಾಕುತ್ತಲೇ ಕಷ್ಟದಿಂದ ಸಾಗುತ್ತಿದ್ದಾರೆ.

Related posts

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಅಭಿನಂದನ್ ಹರೀಶ್ ಕುಮಾರ್ ಅವರು ಕರಂಬಾರು ಗ್ರಾಮದಲ್ಲಿ ವಿಪರೀತ ಮಳೆಗೆ ಹಾನಿಗೊಂಡ ಮನೆಗಳಿಗೆ ಭೇಟಿ

Suddi Udaya

ಗಾಳಿ ಮಳೆ: ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ಬಂದಾರು ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಿಡಿಓ ಸ್ಥಳಕ್ಕೆ ಭೇಟಿ

Suddi Udaya

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya
error: Content is protected !!