23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

ನಡ: ಇಲ್ಲಿಯ ನಡ ಗ್ರಾಮದ ಅಂತ್ರಾಯಪಲ್ಕೆ ನಿವಾಸಿ ಶ್ಯಾಮಸುಂದರ್ ಅವರ ಮನೆಯ ಬಳಿಯಲ್ಲಿ ರಬ್ಬರ್ ತೋಟದ ಮೂಲಕ ಮಳೆ ನೀರು ಹರಿದು ಬಂದು ಗುಡ್ಡ ಕುಸಿತಕ್ಕೊಳಗಾಗಿದ್ದು, ಮನೆಯ ಕಂಪೌಂಡ್ ಕುಸಿತಕ್ಕೊಳಗಾಗಿದೆ. ಇದರಿಂದಾಗಿ ಮನೆಗೆ ಅಪಾಯವಾಗಬಹುದೆಂಬ ಭೀತಿ ಎದುರಾಗಿದೆ.

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಇಂದು ಸಂಜೆ ಮನೆಯ ಸಮೀಪ ಎತ್ತರ ಪ್ರದೇಶದಲ್ಲಿರುವ ರಬ್ಬರ್ ತೋಟದಿಂದ ಮಳೆ ನೀರು ರಭಸವಾಗಿ ಹರಿದು ಕೆಳಗೆ ಬಂದಿದೆ. ಇದರಿಂದ ಮನೆಯ ಸಮೀಪದ ಗುಡ್ಡ ಕುಸಿತಗೊಂಡು ಮಣ್ಣು ಸಹಿತ ನೀರು

ಮನೆಯ ಅಂಗಲದವರೆಗೆ ಬಂದಿದೆ. ರಬ್ಬರ್ ತೋಟದಿಂದ ಮಣ್ಣು ಸಹಿತಿ ನೀರು ಬರುತ್ತಿರುವುದರಿಂದ ರಬ್ಬರ್ ಮರಗಳಿಗೆ ಸಮಸ್ಯೆ ಕಾಡಿದೆ. ಮನೆಯ ಕಂಪೌಂಡ್ ಕುಸಿತಕ್ಕೊಳಗಾಗಿ ಹಾನಿ ಉಂಟಾಗಿದೆ. ರಬ್ಬರ್ ತೋಟ ಎತ್ತರದಲ್ಲಿದ್ದು, ಒಮ್ಮೆಲೆ ನೀರು ಹರಿದು ಬಂದು ಈ ಘಟನೆ ನಡೆದಿದೆ ಎಂದು ಶ್ಯಾಮಸುಂದರ್ ಮಾಹಿತಿ ನೀಡಿದ್ದಾರೆ.

Related posts

ಅಗಳಿ ಪರಿಸರದಲ್ಲಿ ಚಿರತೆ ಓಡಾಟ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯುವ ಹೆಚ್.ಪಿ.ವಿ ವ್ಯಾಕ್ಷಿನೇಷನ್ ಲಸಿಕಾ ಶಿಬಿರ

Suddi Udaya

ತಣ್ಣೀರುಪಂತ: ಕುದ್ಕೋಳಿಕಟ್ಟೆ ಬ್ರಹ್ಮಬೈದರ್ಕಳ ಗರಡಿ ವಾರ್ಷಿಕ ನೇಮೋತ್ಸವ

Suddi Udaya

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಭೇಟಿ

Suddi Udaya
error: Content is protected !!