September 6, 2026
ಗ್ರಾಮಾಂತರ ಸುದ್ದಿ

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

ನಡ: ಇಲ್ಲಿಯ ನಡ ಗ್ರಾಮದ ಅಂತ್ರಾಯಪಲ್ಕೆ ನಿವಾಸಿ ಶ್ಯಾಮಸುಂದರ್ ಅವರ ಮನೆಯ ಬಳಿಯಲ್ಲಿ ರಬ್ಬರ್ ತೋಟದ ಮೂಲಕ ಮಳೆ ನೀರು ಹರಿದು ಬಂದು ಗುಡ್ಡ ಕುಸಿತಕ್ಕೊಳಗಾಗಿದ್ದು, ಮನೆಯ ಕಂಪೌಂಡ್ ಕುಸಿತಕ್ಕೊಳಗಾಗಿದೆ. ಇದರಿಂದಾಗಿ ಮನೆಗೆ ಅಪಾಯವಾಗಬಹುದೆಂಬ ಭೀತಿ ಎದುರಾಗಿದೆ.

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಇಂದು ಸಂಜೆ ಮನೆಯ ಸಮೀಪ ಎತ್ತರ ಪ್ರದೇಶದಲ್ಲಿರುವ ರಬ್ಬರ್ ತೋಟದಿಂದ ಮಳೆ ನೀರು ರಭಸವಾಗಿ ಹರಿದು ಕೆಳಗೆ ಬಂದಿದೆ. ಇದರಿಂದ ಮನೆಯ ಸಮೀಪದ ಗುಡ್ಡ ಕುಸಿತಗೊಂಡು ಮಣ್ಣು ಸಹಿತ ನೀರು

ಮನೆಯ ಅಂಗಲದವರೆಗೆ ಬಂದಿದೆ. ರಬ್ಬರ್ ತೋಟದಿಂದ ಮಣ್ಣು ಸಹಿತಿ ನೀರು ಬರುತ್ತಿರುವುದರಿಂದ ರಬ್ಬರ್ ಮರಗಳಿಗೆ ಸಮಸ್ಯೆ ಕಾಡಿದೆ. ಮನೆಯ ಕಂಪೌಂಡ್ ಕುಸಿತಕ್ಕೊಳಗಾಗಿ ಹಾನಿ ಉಂಟಾಗಿದೆ. ರಬ್ಬರ್ ತೋಟ ಎತ್ತರದಲ್ಲಿದ್ದು, ಒಮ್ಮೆಲೆ ನೀರು ಹರಿದು ಬಂದು ಈ ಘಟನೆ ನಡೆದಿದೆ ಎಂದು ಶ್ಯಾಮಸುಂದರ್ ಮಾಹಿತಿ ನೀಡಿದ್ದಾರೆ.

Related posts

ಮಡಂತ್ಯಾರು ವಲಯದ ಜನಜಾಗೃತ ಸಭೆ

Suddi Udaya

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್‌ದಳದಿಂದ ಪ್ರಶಸ್ತಿ ಪತ್ರ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಕುಂಭಶ್ರೀ ಆಂ.ಮಾ. ಶಾಲೆಯ ಒಂದನೇ ತರಗತಿ ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ವೇಣೂರಿನ ಅಂಚೆಕಛೇರಿ, ಪೊಲೀಸ್ ಠಾಣೆ ಮತ್ತು ಮಾರ್ಕೆಟ್ ಗೆ ಭೇಟಿ

Suddi Udaya
error: Content is protected !!