September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ ಕರ್ಮಂದೊಟ್ಟು ಧರೆ ಕುಸಿದು ಅಪಾಯದಲ್ಲಿರುವ ಕೆಲವು ಮನೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭೇಟಿ,

ಬಳಂಜ: ಕಳೆದ ಕೆಲ ಸಮಯದಿಂದ ಧಾರಕಾರವಾಗಿ ಮಳೆ ಸುರಿಯುತ್ತಿದ್ದು ಕರ್ಮಂದೊಟ್ಟು ಪರಿಸರದಲ್ಲಿ ಧರೆ ಜರಿದು ಪ್ರವಾಹ ಎದುರಾಗಿದ್ದು ಸಂತ್ರಸ್ಥ ಗ್ರಾಮಸ್ಥರಿಗೆ ಬಳಂಜ ಗ್ರಾಮ ಪಂಚಾಯತ್ ನಲ್ಲಿ ತಾತ್ಕಲಿಕ ವ್ಯವಸ್ಥೆ ಕಲ್ಪಿಸಲಾಗಿದೆ.

ಬಳಂಜ ಗ್ರಾಮ ಪಂಚಾಯತ್ ಗೆ ಬೆಳ್ತಂಗಡಿ ತಹಶಶೀಲ್ದಾರ್ ಪೃಥ್ವಿ ಸಾನಿಕಾಮ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಭೇಟಿ ನೀಡಿ ಸಂತ್ರಸ್ತರಿಂದ ಹಾಗೂ ಬಳಂಜ ಗ್ರಾ.ಪಂ ಪಿಡಿಓ ಅವರಿಂದ ಮಾಹಿತಿ ಪಡೆದರು.

ಸಂತ್ರಸ್ಥರಾದ ಉಸ್ಮಾನ್, ಚಂದ್ರಹಾಸ, ಆನಂದ ಆಚಾರ್ಯ, ತಾಹಿರಾ ನಮಗೆ ಬದಲಿ ನಿವೇಶನ ಅಗತ್ಯವಾಗಿ ಬೇಕಾಗಿದೆ.ನಿವೇಶನ ಆಗುವ ತನಕ ನಾವು ಬೇರೆ ಕಡೆಗೆ ಸ್ಥಳಾಂತರವಾಗುವುದಿಲ್ಲ ಎಂದು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿ ನಷ್ಟಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ತಹಶೀಲ್ದಾರ್ ಅವರು ನಿಯಾಮನುಸಾರ ಯಾವ ರೀತಿ ನಿವೇಶನ ನೀಡಬಹುದು ಅದರಂತೆ ಬದಲಿ ನಿವೇಶನ ನೀಡುವ ಭರವಸೆ ನೀಡಿದರು.ನಂತರ ಅಪಾಯದಲ್ಲಿರುವ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ನಾಲ್ಕು ಕುಟುಂಬದಲ್ಲಿ 16 ಸದಸ್ಯರಿದ್ದು ಅದರಲ್ಲಿ 5 ಸಣ್ಣ ಮಕ್ಕಳಿದ್ದಾರೆ.

ಈ ಸಂದರ್ಭದಲ್ಲಿ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್, ಕಂದಾಯ ನೀರಿಕ್ಷಕರಾದ ಕುಮಾರಸ್ವಾಮಿ, ಗ್ರಾಮಕರಣಿಕ ರಫೀಕ್ ಎನ್, ಬಳಂಜ ಗ್ರಾ.ಪಂ ಉಪಾಧ್ಯಕ್ಷ ಯಶೋಧರ ಶೆಟ್ಟಿ ಮತ್ತು ಪಂಚಾಯತ್ ಸದಸ್ಯರು, ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಮತ್ತು ನಿರ್ದೇಶಕರು, ಊರ ಪ್ರಮುಖರು, ಗ್ರಾಮಸ್ಥರು ಇದ್ದರು.

Related posts

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

Suddi Udaya

ಪೋಲಿಸ್ ಇಲಾಖೆಯಲ್ಲಿ ಎ ಎಸ್ ಐ ಯಾಗಿ ಸೇವಾ ನಿವೃತ್ತಿ ಹೊಂದಿದ ಸ್ಯಾಮುವೆಲ್ ಎಂ.ಐ. ನೆಲ್ಯಾಡಿರವರಿಗೆ ಸನ್ಮಾನ

Suddi Udaya

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ : ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ನಾಳ ದಿನೇಶ್ ಶೆಟ್ಟಿ ಯಾನೆ ದಿನ್ನು ಬಂಧನ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ನಲ್ಲಿ ದ್ವಿತೀಯ ವರ್ಷದ ನಾಗಪ್ರತಿಷ್ಠೆ ವರ್ಷಾಚರಣೆ

Suddi Udaya
error: Content is protected !!