23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

ಬಳಂಜ: ಕುಣಿತಾ ಭಜನೆಯಲ್ಲಿ ರಾಜ್ಯವ್ಯಾಪ್ತಿ ಪ್ರಸಿದ್ಧಿ ಪಡೆದಿರುವಂತಹ ವಿವಿಧ ಭಜನೆ ಮಂಡಳಿಗಳಲ್ಲಿ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಕೂಡ ಒಂದು. ಹರೀಶ್ ವೈ ಚಂದ್ರಮ‌ ಬಳಂಜ ಇವರ ಸಂಚಾಲಕತ್ವದಲ್ಲಿ ಮುನ್ನಡೆಯುತ್ತಿರುವ ತಂಡ ಧಾರ್ಮಿಕತೆಯ ಭಕ್ತಿಯ ಹೆಜ್ಜೆಯ ಮೂಲಕ ಹೆಸರು ಗಳಿಸಿ ತನ್ನ ಭಕ್ತಿ ಪಯಣದ 230 ನೇ ಕಾರ್ಯಕ್ರಮವನ್ನು ಹಾವೇರಿ ಜಿಲ್ಲೆಯ ಶ್ರೀ ಶಿರಡಿ ಸಾಯಿ ಬಾಬಾ ದೇವಸ್ಥಾನ ರಾಣೆಬೆನ್ನೂರು ಸಾಯಿ ಬಾಬಾ ಉತ್ಸವ ಮೂರ್ತಿಯ ಗುರುಪೂರ್ಣಿಮೆಯ ಕುಣಿತ ಭಜನೆ ಮೆರವಣಿಗೆಯ ಕಾರ್ಯಕ್ರಮವನ್ನು ನೀಡಿ ಎಲ್ಲರ ಮೆಚ್ಚುಗೆ ಗಳಿಸಿ, ಜನರ ಪ್ರಶಂಸೆಗೆ ಪಾತ್ರವಾಗಿದೆ.ಭಜನೆಯೊಂದಿಗೆ ಹಲವಾರು ಸಮಾಜಮುಖಿ ಕೆಲಸ ಕಾರ್ಯ ಸಾಧಿಸಿ ಸಾರ್ವಜನಿಕರಿಂದ ಪ್ರಶಂಸೆ ಗಳಿಸಿದೆ.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ನಿತ್ಯಾನಂದ ಕುಂದಾಪುರ ಅವರು ಬ್ರಹ್ಮಶ್ರೀ ಕುಣಿತ ಭಜನಾ ತಂಡದ ಸಂಚಾಲಕರಾದ ಹರೀಶ್ ವೈ ಚಂದ್ರಮ ಹಾಗೂ ತಂಡದ ಎಲ್ಲ ಸದಸ್ಯರಿಗೂ ಮತ್ತು ಉಪಸ್ಥಿತರಿದ್ದ ತಂಡದ ಪೋಷಕರಿಗೂ ಶಾಲು ಹಾಕಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರು, ಗುರುಗಳು, ಪೋಷಕರು ಪದಾಧಿಕಾರಿಗಳು ,ತಂಡದ ಸದಸ್ಯರು ಹಾಗೂ ಜಯರಾಮ್ ಕುಂದಾಪುರ ಉಪಸ್ಥಿತರಿದ್ದರು.

Related posts

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

Suddi Udaya

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya

ಶಾಸಕ ಹರೀಶ್ ಪೂಂಜಾ ರವರ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದ ಫಲಶೃತಿ: ಇಂದಬೆಟ್ಟು-ಗುರಿಪಳ್ಳ ರಸ್ತೆಯ ಬದಿಯ ಗಿಡಗಂಟಿಗಳ ತೆರವು ಕಾರ್ಯ

Suddi Udaya

ಜೂ.24: ಜನಸಂಪರ್ಕ ಸಭೆ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ವಿಶೇಷ ಆಹ್ವಾನಿತರ ಸಭೆ: ದೀಪಾವಳಿಯ ತುಡಾರು ಪರ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!