April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾ.ಕೃ.ಪ.ಸ. ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

ತೆಂಕಕಾರಂದೂರು:ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವನ್ನು ನೀಡಲಾಯಿತು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಅವರು ಗುರುರಾಜ್ ಹೆಗ್ಡೆಯವರ ತಾಯಿಗೆ ರೂ. 50 ಸಾವಿರದ ಚೆಕ್ ಹಸ್ತಾಂತರಿಸಿದರು.

ಕಳೆದ ಕೆಲ ತಿಂಗಳುಗಳ ಹಿಂದೆ ಗಂಭೀರ ಖಾಯಿಲೆಯಿಂದ ಬಳಲುತ್ತಿದ್ದ ಗುರುರಾಜ್ ಅವರಿಗೆ ತುರ್ತು ಚಿಕಿತ್ಸೆಯ ಅಗತ್ಯವಿತ್ತು. ಆ ಚಿಕಿತ್ಸೆಗೆ ಸುಮಾರು ರೂ 50 ಲಕ್ಷಕಿಂತ ಹೆಚ್ಚು ಖರ್ಚು ಬೇಕಾಗಿದ್ದು, ಊರವರು, ಹಲವಾರು ಸಂಘ ಸಂಸ್ಥೆಗಳು,ಮಿತ್ರರು ಸೇರಿ ಮೊತ್ತವನ್ನು ಕ್ರೋಡಿಕರಿಸಿದ್ದರು. ಅದರಂತೆ ಅಳದಂಗಡಿ ಸಿಎ ಬ್ಯಾಂಕಿನಿಂದ ವೈದ್ಯಕೀಯ ನೆರವು ನೀಡಲಾಯಿತು. ಇದೀಗ ಗುರುರಾಜ್ ಹೆಗ್ಡೆಯವರು ಗುಣಮುಖರಾಗುತ್ತಿರುವುದು ಎಲ್ಲರಿಗೂ ಸಂತೋಷ ತಂದಿದೆ.

ಈ ಸಂದರ್ಭದಲ್ಲಿ ಅಳದಂಗಡಿ ಸಿಎ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮೀರಾ,ಉಪಾಧ್ಯಕ್ಷ ಜನಾರ್ಧನ ಪೂಜಾರಿ,ನಿರ್ದೇಶಕರಾದ ಗುರುಪ್ರಸಾದ್ ಹೆಗ್ಡೆ,ದೇಜಪ್ಪ ಪೂಜಾರಿ,ದಿನೇಶ್ ಪಿ.ಕೆ,ದೇವಿಪ್ರಸಾದ್ ಶೆಟ್ಟಿ, ಕೊರಗಪ್ಪ,ಹೇಮಂತ್,ಸುಂದರಿ,ಧರ್ಣಪ್ಪ,ವಿಶ್ವನಾಥ ಹೊಳ್ಳ, ಮಮತಾ,ಉಪಸ್ಥಿತರಿದ್ದರು ‌

Related posts

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಸಮೃದ್ದ್ ನಿಟ್ಟಡೆ ತೇರ್ಗಡೆ

Suddi Udaya

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya

ಮುಂಡಾಜೆ : ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ರಾಘವೇಂದ್ರ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

Suddi Udaya

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

Suddi Udaya
error: Content is protected !!