37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

ನಡ: ಇಲ್ಲಿಯ ನಡ ಗ್ರಾಮದ ಅಂತ್ರಾಯಪಲ್ಕೆ ನಿವಾಸಿ ಶ್ಯಾಮಸುಂದರ್ ಅವರ ಮನೆಯ ಬಳಿಯಲ್ಲಿ ರಬ್ಬರ್ ತೋಟದ ಮೂಲಕ ಮಳೆ ನೀರು ಹರಿದು ಬಂದು ಗುಡ್ಡ ಕುಸಿತಕ್ಕೊಳಗಾಗಿದ್ದು, ಮನೆಯ ಕಂಪೌಂಡ್ ಕುಸಿತಕ್ಕೊಳಗಾಗಿದೆ. ಇದರಿಂದಾಗಿ ಮನೆಗೆ ಅಪಾಯವಾಗಬಹುದೆಂಬ ಭೀತಿ ಎದುರಾಗಿದೆ.

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಇಂದು ಸಂಜೆ ಮನೆಯ ಸಮೀಪ ಎತ್ತರ ಪ್ರದೇಶದಲ್ಲಿರುವ ರಬ್ಬರ್ ತೋಟದಿಂದ ಮಳೆ ನೀರು ರಭಸವಾಗಿ ಹರಿದು ಕೆಳಗೆ ಬಂದಿದೆ. ಇದರಿಂದ ಮನೆಯ ಸಮೀಪದ ಗುಡ್ಡ ಕುಸಿತಗೊಂಡು ಮಣ್ಣು ಸಹಿತ ನೀರು

ಮನೆಯ ಅಂಗಲದವರೆಗೆ ಬಂದಿದೆ. ರಬ್ಬರ್ ತೋಟದಿಂದ ಮಣ್ಣು ಸಹಿತಿ ನೀರು ಬರುತ್ತಿರುವುದರಿಂದ ರಬ್ಬರ್ ಮರಗಳಿಗೆ ಸಮಸ್ಯೆ ಕಾಡಿದೆ. ಮನೆಯ ಕಂಪೌಂಡ್ ಕುಸಿತಕ್ಕೊಳಗಾಗಿ ಹಾನಿ ಉಂಟಾಗಿದೆ. ರಬ್ಬರ್ ತೋಟ ಎತ್ತರದಲ್ಲಿದ್ದು, ಒಮ್ಮೆಲೆ ನೀರು ಹರಿದು ಬಂದು ಈ ಘಟನೆ ನಡೆದಿದೆ ಎಂದು ಶ್ಯಾಮಸುಂದರ್ ಮಾಹಿತಿ ನೀಡಿದ್ದಾರೆ.

Related posts

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ಪದಪ್ರಧಾನ

Suddi Udaya

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya

ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಎಂ.ಜಿ. ಶೆಟ್ಟಿಯವರ ನಿಧನಕ್ಕೆ ಸಂತಾಪ

Suddi Udaya
error: Content is protected !!