22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

ನಡ: ಇಲ್ಲಿಯ ನಡ ಗ್ರಾಮದ ಅಂತ್ರಾಯಪಲ್ಕೆ ನಿವಾಸಿ ಶ್ಯಾಮಸುಂದರ್ ಅವರ ಮನೆಯ ಬಳಿಯಲ್ಲಿ ರಬ್ಬರ್ ತೋಟದ ಮೂಲಕ ಮಳೆ ನೀರು ಹರಿದು ಬಂದು ಗುಡ್ಡ ಕುಸಿತಕ್ಕೊಳಗಾಗಿದ್ದು, ಮನೆಯ ಕಂಪೌಂಡ್ ಕುಸಿತಕ್ಕೊಳಗಾಗಿದೆ. ಇದರಿಂದಾಗಿ ಮನೆಗೆ ಅಪಾಯವಾಗಬಹುದೆಂಬ ಭೀತಿ ಎದುರಾಗಿದೆ.

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಇಂದು ಸಂಜೆ ಮನೆಯ ಸಮೀಪ ಎತ್ತರ ಪ್ರದೇಶದಲ್ಲಿರುವ ರಬ್ಬರ್ ತೋಟದಿಂದ ಮಳೆ ನೀರು ರಭಸವಾಗಿ ಹರಿದು ಕೆಳಗೆ ಬಂದಿದೆ. ಇದರಿಂದ ಮನೆಯ ಸಮೀಪದ ಗುಡ್ಡ ಕುಸಿತಗೊಂಡು ಮಣ್ಣು ಸಹಿತ ನೀರು

ಮನೆಯ ಅಂಗಲದವರೆಗೆ ಬಂದಿದೆ. ರಬ್ಬರ್ ತೋಟದಿಂದ ಮಣ್ಣು ಸಹಿತಿ ನೀರು ಬರುತ್ತಿರುವುದರಿಂದ ರಬ್ಬರ್ ಮರಗಳಿಗೆ ಸಮಸ್ಯೆ ಕಾಡಿದೆ. ಮನೆಯ ಕಂಪೌಂಡ್ ಕುಸಿತಕ್ಕೊಳಗಾಗಿ ಹಾನಿ ಉಂಟಾಗಿದೆ. ರಬ್ಬರ್ ತೋಟ ಎತ್ತರದಲ್ಲಿದ್ದು, ಒಮ್ಮೆಲೆ ನೀರು ಹರಿದು ಬಂದು ಈ ಘಟನೆ ನಡೆದಿದೆ ಎಂದು ಶ್ಯಾಮಸುಂದರ್ ಮಾಹಿತಿ ನೀಡಿದ್ದಾರೆ.

Related posts

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya

ಶಿರ್ಲಾಲು ಅನ್ನಪೂರ್ಣೇಶ್ವರಿ ಸ್ವಸಹಾಯ ಸಂಘದ ರಜತ ಮಹೋತ್ಸವ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!