23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

ನಡ: ಇಲ್ಲಿಯ ನಡ ಗ್ರಾಮದ ಅಂತ್ರಾಯಪಲ್ಕೆ ನಿವಾಸಿ ಶ್ಯಾಮಸುಂದರ್ ಅವರ ಮನೆಯ ಬಳಿಯಲ್ಲಿ ರಬ್ಬರ್ ತೋಟದ ಮೂಲಕ ಮಳೆ ನೀರು ಹರಿದು ಬಂದು ಗುಡ್ಡ ಕುಸಿತಕ್ಕೊಳಗಾಗಿದ್ದು, ಮನೆಯ ಕಂಪೌಂಡ್ ಕುಸಿತಕ್ಕೊಳಗಾಗಿದೆ. ಇದರಿಂದಾಗಿ ಮನೆಗೆ ಅಪಾಯವಾಗಬಹುದೆಂಬ ಭೀತಿ ಎದುರಾಗಿದೆ.

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಇಂದು ಸಂಜೆ ಮನೆಯ ಸಮೀಪ ಎತ್ತರ ಪ್ರದೇಶದಲ್ಲಿರುವ ರಬ್ಬರ್ ತೋಟದಿಂದ ಮಳೆ ನೀರು ರಭಸವಾಗಿ ಹರಿದು ಕೆಳಗೆ ಬಂದಿದೆ. ಇದರಿಂದ ಮನೆಯ ಸಮೀಪದ ಗುಡ್ಡ ಕುಸಿತಗೊಂಡು ಮಣ್ಣು ಸಹಿತ ನೀರು

ಮನೆಯ ಅಂಗಲದವರೆಗೆ ಬಂದಿದೆ. ರಬ್ಬರ್ ತೋಟದಿಂದ ಮಣ್ಣು ಸಹಿತಿ ನೀರು ಬರುತ್ತಿರುವುದರಿಂದ ರಬ್ಬರ್ ಮರಗಳಿಗೆ ಸಮಸ್ಯೆ ಕಾಡಿದೆ. ಮನೆಯ ಕಂಪೌಂಡ್ ಕುಸಿತಕ್ಕೊಳಗಾಗಿ ಹಾನಿ ಉಂಟಾಗಿದೆ. ರಬ್ಬರ್ ತೋಟ ಎತ್ತರದಲ್ಲಿದ್ದು, ಒಮ್ಮೆಲೆ ನೀರು ಹರಿದು ಬಂದು ಈ ಘಟನೆ ನಡೆದಿದೆ ಎಂದು ಶ್ಯಾಮಸುಂದರ್ ಮಾಹಿತಿ ನೀಡಿದ್ದಾರೆ.

Related posts

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಮುಂಬಯಿಯಲ್ಲಿ ಟೀಮ್ ಯುವ ಬ್ರಿಗೇಡ್ ನಿಂದ ಶಾಸಕ‌ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶ

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ನಾಲ್ಕು ಪುರುಷ ಕಲಾವಿದರಿಗೆ ಸನ್ಮಾನ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ಕವನ ವಾಚನ ಸ್ಪರ್ಧೆ: ಎಲ್ ಸಿ ಆರ್ ಪದವಿ ಕಾಲೇಜು ವಿದ್ಯಾರ್ಥಿನಿ ನವ್ಯ ದ್ವಿತೀಯ ಸ್ಥಾನ

Suddi Udaya
error: Content is protected !!