25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

ನಡ: ಇಲ್ಲಿಯ ನಡ ಗ್ರಾಮದ ಅಂತ್ರಾಯಪಲ್ಕೆ ನಿವಾಸಿ ಶ್ಯಾಮಸುಂದರ್ ಅವರ ಮನೆಯ ಬಳಿಯಲ್ಲಿ ರಬ್ಬರ್ ತೋಟದ ಮೂಲಕ ಮಳೆ ನೀರು ಹರಿದು ಬಂದು ಗುಡ್ಡ ಕುಸಿತಕ್ಕೊಳಗಾಗಿದ್ದು, ಮನೆಯ ಕಂಪೌಂಡ್ ಕುಸಿತಕ್ಕೊಳಗಾಗಿದೆ. ಇದರಿಂದಾಗಿ ಮನೆಗೆ ಅಪಾಯವಾಗಬಹುದೆಂಬ ಭೀತಿ ಎದುರಾಗಿದೆ.

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಇಂದು ಸಂಜೆ ಮನೆಯ ಸಮೀಪ ಎತ್ತರ ಪ್ರದೇಶದಲ್ಲಿರುವ ರಬ್ಬರ್ ತೋಟದಿಂದ ಮಳೆ ನೀರು ರಭಸವಾಗಿ ಹರಿದು ಕೆಳಗೆ ಬಂದಿದೆ. ಇದರಿಂದ ಮನೆಯ ಸಮೀಪದ ಗುಡ್ಡ ಕುಸಿತಗೊಂಡು ಮಣ್ಣು ಸಹಿತ ನೀರು

ಮನೆಯ ಅಂಗಲದವರೆಗೆ ಬಂದಿದೆ. ರಬ್ಬರ್ ತೋಟದಿಂದ ಮಣ್ಣು ಸಹಿತಿ ನೀರು ಬರುತ್ತಿರುವುದರಿಂದ ರಬ್ಬರ್ ಮರಗಳಿಗೆ ಸಮಸ್ಯೆ ಕಾಡಿದೆ. ಮನೆಯ ಕಂಪೌಂಡ್ ಕುಸಿತಕ್ಕೊಳಗಾಗಿ ಹಾನಿ ಉಂಟಾಗಿದೆ. ರಬ್ಬರ್ ತೋಟ ಎತ್ತರದಲ್ಲಿದ್ದು, ಒಮ್ಮೆಲೆ ನೀರು ಹರಿದು ಬಂದು ಈ ಘಟನೆ ನಡೆದಿದೆ ಎಂದು ಶ್ಯಾಮಸುಂದರ್ ಮಾಹಿತಿ ನೀಡಿದ್ದಾರೆ.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಸಾಧನ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಮಾತೃ ವೃಂದ ಶಿಶುಪಾಲನ ಕೇಂದ್ರ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಡಿ.8 ರಿಂದ ಡಿ.12 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya
error: Content is protected !!