September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

ಬಳಂಜ: ಕುಣಿತಾ ಭಜನೆಯಲ್ಲಿ ರಾಜ್ಯವ್ಯಾಪ್ತಿ ಪ್ರಸಿದ್ಧಿ ಪಡೆದಿರುವಂತಹ ವಿವಿಧ ಭಜನೆ ಮಂಡಳಿಗಳಲ್ಲಿ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಕೂಡ ಒಂದು. ಹರೀಶ್ ವೈ ಚಂದ್ರಮ‌ ಬಳಂಜ ಇವರ ಸಂಚಾಲಕತ್ವದಲ್ಲಿ ಮುನ್ನಡೆಯುತ್ತಿರುವ ತಂಡ ಧಾರ್ಮಿಕತೆಯ ಭಕ್ತಿಯ ಹೆಜ್ಜೆಯ ಮೂಲಕ ಹೆಸರು ಗಳಿಸಿ ತನ್ನ ಭಕ್ತಿ ಪಯಣದ 230 ನೇ ಕಾರ್ಯಕ್ರಮವನ್ನು ಹಾವೇರಿ ಜಿಲ್ಲೆಯ ಶ್ರೀ ಶಿರಡಿ ಸಾಯಿ ಬಾಬಾ ದೇವಸ್ಥಾನ ರಾಣೆಬೆನ್ನೂರು ಸಾಯಿ ಬಾಬಾ ಉತ್ಸವ ಮೂರ್ತಿಯ ಗುರುಪೂರ್ಣಿಮೆಯ ಕುಣಿತ ಭಜನೆ ಮೆರವಣಿಗೆಯ ಕಾರ್ಯಕ್ರಮವನ್ನು ನೀಡಿ ಎಲ್ಲರ ಮೆಚ್ಚುಗೆ ಗಳಿಸಿ, ಜನರ ಪ್ರಶಂಸೆಗೆ ಪಾತ್ರವಾಗಿದೆ.ಭಜನೆಯೊಂದಿಗೆ ಹಲವಾರು ಸಮಾಜಮುಖಿ ಕೆಲಸ ಕಾರ್ಯ ಸಾಧಿಸಿ ಸಾರ್ವಜನಿಕರಿಂದ ಪ್ರಶಂಸೆ ಗಳಿಸಿದೆ.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ನಿತ್ಯಾನಂದ ಕುಂದಾಪುರ ಅವರು ಬ್ರಹ್ಮಶ್ರೀ ಕುಣಿತ ಭಜನಾ ತಂಡದ ಸಂಚಾಲಕರಾದ ಹರೀಶ್ ವೈ ಚಂದ್ರಮ ಹಾಗೂ ತಂಡದ ಎಲ್ಲ ಸದಸ್ಯರಿಗೂ ಮತ್ತು ಉಪಸ್ಥಿತರಿದ್ದ ತಂಡದ ಪೋಷಕರಿಗೂ ಶಾಲು ಹಾಕಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರು, ಗುರುಗಳು, ಪೋಷಕರು ಪದಾಧಿಕಾರಿಗಳು ,ತಂಡದ ಸದಸ್ಯರು ಹಾಗೂ ಜಯರಾಮ್ ಕುಂದಾಪುರ ಉಪಸ್ಥಿತರಿದ್ದರು.

Related posts

ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪುರಿಗೆ ಗೌರವಾರ್ಪಣೆ

Suddi Udaya

ಜನಸ್ಪಂದನ ಸಭೆಯ ಫಲಶ್ರುತಿ 108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ

Suddi Udaya

ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಡಾ. ಪ್ರಸನ್ನ ಹೆಬ್ಬಾರ್ ಭೇಟಿ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಅಳದಂಗಡಿ ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕನ್ಯಾಡಿ ಸುಮತಿ ಎಸ್. ಜೈನ್ ನಿಧನ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯ ಅಮೋಘ ಸಾಧನೆ- ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ಪ್ರಾರ್ಥನಾ

Suddi Udaya
error: Content is protected !!