25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

ಬಳಂಜ: ಕುಣಿತಾ ಭಜನೆಯಲ್ಲಿ ರಾಜ್ಯವ್ಯಾಪ್ತಿ ಪ್ರಸಿದ್ಧಿ ಪಡೆದಿರುವಂತಹ ವಿವಿಧ ಭಜನೆ ಮಂಡಳಿಗಳಲ್ಲಿ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಕೂಡ ಒಂದು. ಹರೀಶ್ ವೈ ಚಂದ್ರಮ‌ ಬಳಂಜ ಇವರ ಸಂಚಾಲಕತ್ವದಲ್ಲಿ ಮುನ್ನಡೆಯುತ್ತಿರುವ ತಂಡ ಧಾರ್ಮಿಕತೆಯ ಭಕ್ತಿಯ ಹೆಜ್ಜೆಯ ಮೂಲಕ ಹೆಸರು ಗಳಿಸಿ ತನ್ನ ಭಕ್ತಿ ಪಯಣದ 230 ನೇ ಕಾರ್ಯಕ್ರಮವನ್ನು ಹಾವೇರಿ ಜಿಲ್ಲೆಯ ಶ್ರೀ ಶಿರಡಿ ಸಾಯಿ ಬಾಬಾ ದೇವಸ್ಥಾನ ರಾಣೆಬೆನ್ನೂರು ಸಾಯಿ ಬಾಬಾ ಉತ್ಸವ ಮೂರ್ತಿಯ ಗುರುಪೂರ್ಣಿಮೆಯ ಕುಣಿತ ಭಜನೆ ಮೆರವಣಿಗೆಯ ಕಾರ್ಯಕ್ರಮವನ್ನು ನೀಡಿ ಎಲ್ಲರ ಮೆಚ್ಚುಗೆ ಗಳಿಸಿ, ಜನರ ಪ್ರಶಂಸೆಗೆ ಪಾತ್ರವಾಗಿದೆ.ಭಜನೆಯೊಂದಿಗೆ ಹಲವಾರು ಸಮಾಜಮುಖಿ ಕೆಲಸ ಕಾರ್ಯ ಸಾಧಿಸಿ ಸಾರ್ವಜನಿಕರಿಂದ ಪ್ರಶಂಸೆ ಗಳಿಸಿದೆ.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ನಿತ್ಯಾನಂದ ಕುಂದಾಪುರ ಅವರು ಬ್ರಹ್ಮಶ್ರೀ ಕುಣಿತ ಭಜನಾ ತಂಡದ ಸಂಚಾಲಕರಾದ ಹರೀಶ್ ವೈ ಚಂದ್ರಮ ಹಾಗೂ ತಂಡದ ಎಲ್ಲ ಸದಸ್ಯರಿಗೂ ಮತ್ತು ಉಪಸ್ಥಿತರಿದ್ದ ತಂಡದ ಪೋಷಕರಿಗೂ ಶಾಲು ಹಾಕಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರು, ಗುರುಗಳು, ಪೋಷಕರು ಪದಾಧಿಕಾರಿಗಳು ,ತಂಡದ ಸದಸ್ಯರು ಹಾಗೂ ಜಯರಾಮ್ ಕುಂದಾಪುರ ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya

ಬಜಿರೆ ಪಾಲ್ದ್ಯಾರು ಮನೆಯ ಶ್ರೀಮತಿ ಚಿನ್ನಮ್ಮ ನಿಧನ

Suddi Udaya

ಧರ್ಮಸ್ಥಳ : ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಹಾಗೂ ರೈತರಿಗೆ ಮತ್ತು ಕೃಷಿಯಂತ್ರಧಾರಾ ಕೇಂದ್ರಗಳಿಗೆ ಕೃಷಿ ಯಂತ್ರೋಪಕರಣಗಳ ಹಸ್ತಾಂತರ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಗ್ರಾಮೀಣ ಜೀವನೋಪಾಯ ಮತ್ತು ಸುಸ್ಥಿರತೆ: ಜಾಗತಿಕ ದೃಷ್ಟಿಕೋನ’ ಕುರಿತ ಎರಡು ದಿನದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ

Suddi Udaya
error: Content is protected !!