25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾ.ಕೃ.ಪ.ಸ. ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

ತೆಂಕಕಾರಂದೂರು:ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವನ್ನು ನೀಡಲಾಯಿತು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಅವರು ಗುರುರಾಜ್ ಹೆಗ್ಡೆಯವರ ತಾಯಿಗೆ ರೂ. 50 ಸಾವಿರದ ಚೆಕ್ ಹಸ್ತಾಂತರಿಸಿದರು.

ಕಳೆದ ಕೆಲ ತಿಂಗಳುಗಳ ಹಿಂದೆ ಗಂಭೀರ ಖಾಯಿಲೆಯಿಂದ ಬಳಲುತ್ತಿದ್ದ ಗುರುರಾಜ್ ಅವರಿಗೆ ತುರ್ತು ಚಿಕಿತ್ಸೆಯ ಅಗತ್ಯವಿತ್ತು. ಆ ಚಿಕಿತ್ಸೆಗೆ ಸುಮಾರು ರೂ 50 ಲಕ್ಷಕಿಂತ ಹೆಚ್ಚು ಖರ್ಚು ಬೇಕಾಗಿದ್ದು, ಊರವರು, ಹಲವಾರು ಸಂಘ ಸಂಸ್ಥೆಗಳು,ಮಿತ್ರರು ಸೇರಿ ಮೊತ್ತವನ್ನು ಕ್ರೋಡಿಕರಿಸಿದ್ದರು. ಅದರಂತೆ ಅಳದಂಗಡಿ ಸಿಎ ಬ್ಯಾಂಕಿನಿಂದ ವೈದ್ಯಕೀಯ ನೆರವು ನೀಡಲಾಯಿತು. ಇದೀಗ ಗುರುರಾಜ್ ಹೆಗ್ಡೆಯವರು ಗುಣಮುಖರಾಗುತ್ತಿರುವುದು ಎಲ್ಲರಿಗೂ ಸಂತೋಷ ತಂದಿದೆ.

ಈ ಸಂದರ್ಭದಲ್ಲಿ ಅಳದಂಗಡಿ ಸಿಎ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮೀರಾ,ಉಪಾಧ್ಯಕ್ಷ ಜನಾರ್ಧನ ಪೂಜಾರಿ,ನಿರ್ದೇಶಕರಾದ ಗುರುಪ್ರಸಾದ್ ಹೆಗ್ಡೆ,ದೇಜಪ್ಪ ಪೂಜಾರಿ,ದಿನೇಶ್ ಪಿ.ಕೆ,ದೇವಿಪ್ರಸಾದ್ ಶೆಟ್ಟಿ, ಕೊರಗಪ್ಪ,ಹೇಮಂತ್,ಸುಂದರಿ,ಧರ್ಣಪ್ಪ,ವಿಶ್ವನಾಥ ಹೊಳ್ಳ, ಮಮತಾ,ಉಪಸ್ಥಿತರಿದ್ದರು ‌

Related posts

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಗೇರುಕಟ್ಟೆ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪುರುಷೋತ್ತಮ ಜಿ

Suddi Udaya

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya

ಭಾರೀ ಗಾಳಿ ಮಳೆ: ರೆಖ್ಯದಲ್ಲಿ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತ

Suddi Udaya
error: Content is protected !!