July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾ.ಕೃ.ಪ.ಸ. ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

ತೆಂಕಕಾರಂದೂರು:ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವನ್ನು ನೀಡಲಾಯಿತು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಅವರು ಗುರುರಾಜ್ ಹೆಗ್ಡೆಯವರ ತಾಯಿಗೆ ರೂ. 50 ಸಾವಿರದ ಚೆಕ್ ಹಸ್ತಾಂತರಿಸಿದರು.

ಕಳೆದ ಕೆಲ ತಿಂಗಳುಗಳ ಹಿಂದೆ ಗಂಭೀರ ಖಾಯಿಲೆಯಿಂದ ಬಳಲುತ್ತಿದ್ದ ಗುರುರಾಜ್ ಅವರಿಗೆ ತುರ್ತು ಚಿಕಿತ್ಸೆಯ ಅಗತ್ಯವಿತ್ತು. ಆ ಚಿಕಿತ್ಸೆಗೆ ಸುಮಾರು ರೂ 50 ಲಕ್ಷಕಿಂತ ಹೆಚ್ಚು ಖರ್ಚು ಬೇಕಾಗಿದ್ದು, ಊರವರು, ಹಲವಾರು ಸಂಘ ಸಂಸ್ಥೆಗಳು,ಮಿತ್ರರು ಸೇರಿ ಮೊತ್ತವನ್ನು ಕ್ರೋಡಿಕರಿಸಿದ್ದರು. ಅದರಂತೆ ಅಳದಂಗಡಿ ಸಿಎ ಬ್ಯಾಂಕಿನಿಂದ ವೈದ್ಯಕೀಯ ನೆರವು ನೀಡಲಾಯಿತು. ಇದೀಗ ಗುರುರಾಜ್ ಹೆಗ್ಡೆಯವರು ಗುಣಮುಖರಾಗುತ್ತಿರುವುದು ಎಲ್ಲರಿಗೂ ಸಂತೋಷ ತಂದಿದೆ.

ಈ ಸಂದರ್ಭದಲ್ಲಿ ಅಳದಂಗಡಿ ಸಿಎ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮೀರಾ,ಉಪಾಧ್ಯಕ್ಷ ಜನಾರ್ಧನ ಪೂಜಾರಿ,ನಿರ್ದೇಶಕರಾದ ಗುರುಪ್ರಸಾದ್ ಹೆಗ್ಡೆ,ದೇಜಪ್ಪ ಪೂಜಾರಿ,ದಿನೇಶ್ ಪಿ.ಕೆ,ದೇವಿಪ್ರಸಾದ್ ಶೆಟ್ಟಿ, ಕೊರಗಪ್ಪ,ಹೇಮಂತ್,ಸುಂದರಿ,ಧರ್ಣಪ್ಪ,ವಿಶ್ವನಾಥ ಹೊಳ್ಳ, ಮಮತಾ,ಉಪಸ್ಥಿತರಿದ್ದರು ‌

Related posts

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಮೂರ್ತೆದಾರ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು

Suddi Udaya

ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ, ಕಠಿಣ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ, ಪೊಲೀಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ

Suddi Udaya
error: Content is protected !!