September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ನಿಂದ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ತುರ್ತು ಸಭೆ

ಕೊಕ್ಕಡ ಗ್ರಾಮ ಪಂಚಾಯತ್ ನ ತುರ್ತು ಸಭೆಯು ಗ್ರಾ.ಪಂ ಅಧ್ಯಕ್ಷೆ ಬೇಬಿಯವರ ಅಧ್ಯಕ್ಷತೆಯಲ್ಲಿ ಜು.31ರಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಸಭೆಯಲ್ಲಿ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ಚರ್ಚಿಸಲಾಯಿತು. ಬ್ಯಾಂಕ್ ನ ಗ್ರಾಹಕರಿಗೆ ಗ್ರಾಮಸ್ಥರಿಗೆ ಈ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆನರಾ ಬ್ಯಾಂಕ್ ಹಾಗೂ ಗ್ರಾ.ಪಂ. ಕರಪತ್ರ ಮುದ್ರಿಸಿ ಹಂಚುವುದಾಗಿ ತಿಳಿಸಲಾಯಿತು. ಮುಂದೇ ಹಣ ಕಳಕೊಂಡ ಗ್ರಾಹಕರು ಕೂಡಲೇ ಸಂಬಂಧಪಟ್ಟ ಬ್ಯಾಂಕ್ , ಬೀಟ್ ಪೊಲೀಸರಿಗೆ ಕಂಪ್ಲೇಟ್ ಮಾಡುವುದು ನಂತರ ಪಂಚಾಯತ್ ಗೆ ತಿಳಿಸಬೇಕೆಂದು ಸಭೆಯಲ್ಲಿ ವ್ಯಕ್ತವಾಯಿತು.

ಈ ವೇಳೆ ಕೊಕ್ಕಡ ಕೆನರಾ ಬ್ಯಾಂಕ್ ಮೇನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಗಣೇಶ್, ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಕೊಕ್ಕಡ ಶಾಖಾ ಮಾನೇಜರ್, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಕೊಕ್ಕಡ ಶಾಖಾ ಮಾನೇಜರ್, ಕೊಕ್ಕಡ ಎಸ್.ಸಿ.ಡಿ.ಸಿಸಿ ಬ್ಯಾಂಕ್ ಮೇನೇಜರ್ , ಬೀಟ್ ಪೊಲೀಸ್ , ಅಲ್ಲದೇ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ , ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ನಿಕಟಪೂರ್ವಾಧ್ಯಕ್ಷ ಯೋಗೀಶ್ ಆಲಂಬಿಲ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ಧನ್ಯವಾದವಿತ್ತರು.

Related posts

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಕಾರ್ಯಾಗಾರ ಸಂಪನ್ನ

Suddi Udaya

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಮಹಾಸಭೆ

Suddi Udaya

ಕುವೆಟ್ಟು ಸ. ಉ. ಪ್ರಾ. ಶಾಲೆಯ ಅಡುಗೆ ಕೋಣೆಯ ವಿಸ್ತೃತ ಕೊಠಡಿ ಉದ್ಘಾಟನೆ

Suddi Udaya

ಸೆ.6: ಯುವಶಕ್ತಿ ಫ್ರೆಂಡ್ಸ್ ನಾಲ್ಕೂರಿನಲ್ಲಿ 4ನೇ ವರ್ಷದ ಮೊಸರು ಕುಡಿಕೆ ಉತ್ಸವ: ಪುಟಾಣಿಗಳಿಗೆ ಕೃಷ್ಣ ವೇಷ ಸ್ಪರ್ಧೆ,ಮುದ್ದುಕೃಷ್ಣ,ಬಾಲಕೃಷ್ಣ ಸ್ಪರ್ಧೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಬೊಳಿಯಾರು ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ: ಆಟೋ ಚಾಲಕ ದಿನೇಶ್‌ರವರನ್ನು ಭೇಟಿಯಾದ ರಕ್ಷಿತ್ ಶಿವರಾಂ

Suddi Udaya

ಜ.2: ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆ ಹಾಗೂ ಪುರಸ್ಕಾರ ಸಮಾರಂಭ

Suddi Udaya
error: Content is protected !!