July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ನಿಂದ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ತುರ್ತು ಸಭೆ

ಕೊಕ್ಕಡ ಗ್ರಾಮ ಪಂಚಾಯತ್ ನ ತುರ್ತು ಸಭೆಯು ಗ್ರಾ.ಪಂ ಅಧ್ಯಕ್ಷೆ ಬೇಬಿಯವರ ಅಧ್ಯಕ್ಷತೆಯಲ್ಲಿ ಜು.31ರಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಸಭೆಯಲ್ಲಿ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ಚರ್ಚಿಸಲಾಯಿತು. ಬ್ಯಾಂಕ್ ನ ಗ್ರಾಹಕರಿಗೆ ಗ್ರಾಮಸ್ಥರಿಗೆ ಈ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆನರಾ ಬ್ಯಾಂಕ್ ಹಾಗೂ ಗ್ರಾ.ಪಂ. ಕರಪತ್ರ ಮುದ್ರಿಸಿ ಹಂಚುವುದಾಗಿ ತಿಳಿಸಲಾಯಿತು. ಮುಂದೇ ಹಣ ಕಳಕೊಂಡ ಗ್ರಾಹಕರು ಕೂಡಲೇ ಸಂಬಂಧಪಟ್ಟ ಬ್ಯಾಂಕ್ , ಬೀಟ್ ಪೊಲೀಸರಿಗೆ ಕಂಪ್ಲೇಟ್ ಮಾಡುವುದು ನಂತರ ಪಂಚಾಯತ್ ಗೆ ತಿಳಿಸಬೇಕೆಂದು ಸಭೆಯಲ್ಲಿ ವ್ಯಕ್ತವಾಯಿತು.

ಈ ವೇಳೆ ಕೊಕ್ಕಡ ಕೆನರಾ ಬ್ಯಾಂಕ್ ಮೇನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಗಣೇಶ್, ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಕೊಕ್ಕಡ ಶಾಖಾ ಮಾನೇಜರ್, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಕೊಕ್ಕಡ ಶಾಖಾ ಮಾನೇಜರ್, ಕೊಕ್ಕಡ ಎಸ್.ಸಿ.ಡಿ.ಸಿಸಿ ಬ್ಯಾಂಕ್ ಮೇನೇಜರ್ , ಬೀಟ್ ಪೊಲೀಸ್ , ಅಲ್ಲದೇ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ , ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ನಿಕಟಪೂರ್ವಾಧ್ಯಕ್ಷ ಯೋಗೀಶ್ ಆಲಂಬಿಲ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ಧನ್ಯವಾದವಿತ್ತರು.

Related posts

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ದಯಾ ವಿಶೇಷ ಶಾಲೆಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

Suddi Udaya

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ನಾವೂರು ಸರ್ವೋದಯ ಟ್ರಸ್ಟ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!