22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

ನಡ: ಇಲ್ಲಿಯ ನಡ ಗ್ರಾಮದ ಅಂತ್ರಾಯಪಲ್ಕೆ ನಿವಾಸಿ ಶ್ಯಾಮಸುಂದರ್ ಅವರ ಮನೆಯ ಬಳಿಯಲ್ಲಿ ರಬ್ಬರ್ ತೋಟದ ಮೂಲಕ ಮಳೆ ನೀರು ಹರಿದು ಬಂದು ಗುಡ್ಡ ಕುಸಿತಕ್ಕೊಳಗಾಗಿದ್ದು, ಮನೆಯ ಕಂಪೌಂಡ್ ಕುಸಿತಕ್ಕೊಳಗಾಗಿದೆ. ಇದರಿಂದಾಗಿ ಮನೆಗೆ ಅಪಾಯವಾಗಬಹುದೆಂಬ ಭೀತಿ ಎದುರಾಗಿದೆ.

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಇಂದು ಸಂಜೆ ಮನೆಯ ಸಮೀಪ ಎತ್ತರ ಪ್ರದೇಶದಲ್ಲಿರುವ ರಬ್ಬರ್ ತೋಟದಿಂದ ಮಳೆ ನೀರು ರಭಸವಾಗಿ ಹರಿದು ಕೆಳಗೆ ಬಂದಿದೆ. ಇದರಿಂದ ಮನೆಯ ಸಮೀಪದ ಗುಡ್ಡ ಕುಸಿತಗೊಂಡು ಮಣ್ಣು ಸಹಿತ ನೀರು

ಮನೆಯ ಅಂಗಲದವರೆಗೆ ಬಂದಿದೆ. ರಬ್ಬರ್ ತೋಟದಿಂದ ಮಣ್ಣು ಸಹಿತಿ ನೀರು ಬರುತ್ತಿರುವುದರಿಂದ ರಬ್ಬರ್ ಮರಗಳಿಗೆ ಸಮಸ್ಯೆ ಕಾಡಿದೆ. ಮನೆಯ ಕಂಪೌಂಡ್ ಕುಸಿತಕ್ಕೊಳಗಾಗಿ ಹಾನಿ ಉಂಟಾಗಿದೆ. ರಬ್ಬರ್ ತೋಟ ಎತ್ತರದಲ್ಲಿದ್ದು, ಒಮ್ಮೆಲೆ ನೀರು ಹರಿದು ಬಂದು ಈ ಘಟನೆ ನಡೆದಿದೆ ಎಂದು ಶ್ಯಾಮಸುಂದರ್ ಮಾಹಿತಿ ನೀಡಿದ್ದಾರೆ.

Related posts

ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆ : ಗುರುವಾಯನಕೆರೆಯ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ಇಳಂತಿಲದಲ್ಲಿ ಕುಣಿತ ಭಜನಾ ತರಬೇತಿ ಆರಂಭೋತ್ಸವ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಿದ್ಧಶ್ರೀ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

Suddi Udaya

ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ

Suddi Udaya
error: Content is protected !!