25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ ಕರ್ಮಂದೊಟ್ಟು ಧರೆ ಕುಸಿದು ಅಪಾಯದಲ್ಲಿರುವ ಕೆಲವು ಮನೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭೇಟಿ,

ಬಳಂಜ: ಕಳೆದ ಕೆಲ ಸಮಯದಿಂದ ಧಾರಕಾರವಾಗಿ ಮಳೆ ಸುರಿಯುತ್ತಿದ್ದು ಕರ್ಮಂದೊಟ್ಟು ಪರಿಸರದಲ್ಲಿ ಧರೆ ಜರಿದು ಪ್ರವಾಹ ಎದುರಾಗಿದ್ದು ಸಂತ್ರಸ್ಥ ಗ್ರಾಮಸ್ಥರಿಗೆ ಬಳಂಜ ಗ್ರಾಮ ಪಂಚಾಯತ್ ನಲ್ಲಿ ತಾತ್ಕಲಿಕ ವ್ಯವಸ್ಥೆ ಕಲ್ಪಿಸಲಾಗಿದೆ.

ಬಳಂಜ ಗ್ರಾಮ ಪಂಚಾಯತ್ ಗೆ ಬೆಳ್ತಂಗಡಿ ತಹಶಶೀಲ್ದಾರ್ ಪೃಥ್ವಿ ಸಾನಿಕಾಮ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಭೇಟಿ ನೀಡಿ ಸಂತ್ರಸ್ತರಿಂದ ಹಾಗೂ ಬಳಂಜ ಗ್ರಾ.ಪಂ ಪಿಡಿಓ ಅವರಿಂದ ಮಾಹಿತಿ ಪಡೆದರು.

ಸಂತ್ರಸ್ಥರಾದ ಉಸ್ಮಾನ್, ಚಂದ್ರಹಾಸ, ಆನಂದ ಆಚಾರ್ಯ, ತಾಹಿರಾ ನಮಗೆ ಬದಲಿ ನಿವೇಶನ ಅಗತ್ಯವಾಗಿ ಬೇಕಾಗಿದೆ.ನಿವೇಶನ ಆಗುವ ತನಕ ನಾವು ಬೇರೆ ಕಡೆಗೆ ಸ್ಥಳಾಂತರವಾಗುವುದಿಲ್ಲ ಎಂದು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿ ನಷ್ಟಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ತಹಶೀಲ್ದಾರ್ ಅವರು ನಿಯಾಮನುಸಾರ ಯಾವ ರೀತಿ ನಿವೇಶನ ನೀಡಬಹುದು ಅದರಂತೆ ಬದಲಿ ನಿವೇಶನ ನೀಡುವ ಭರವಸೆ ನೀಡಿದರು.ನಂತರ ಅಪಾಯದಲ್ಲಿರುವ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ನಾಲ್ಕು ಕುಟುಂಬದಲ್ಲಿ 16 ಸದಸ್ಯರಿದ್ದು ಅದರಲ್ಲಿ 5 ಸಣ್ಣ ಮಕ್ಕಳಿದ್ದಾರೆ.

ಈ ಸಂದರ್ಭದಲ್ಲಿ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್, ಕಂದಾಯ ನೀರಿಕ್ಷಕರಾದ ಕುಮಾರಸ್ವಾಮಿ, ಗ್ರಾಮಕರಣಿಕ ರಫೀಕ್ ಎನ್, ಬಳಂಜ ಗ್ರಾ.ಪಂ ಉಪಾಧ್ಯಕ್ಷ ಯಶೋಧರ ಶೆಟ್ಟಿ ಮತ್ತು ಪಂಚಾಯತ್ ಸದಸ್ಯರು, ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಮತ್ತು ನಿರ್ದೇಶಕರು, ಊರ ಪ್ರಮುಖರು, ಗ್ರಾಮಸ್ಥರು ಇದ್ದರು.

Related posts

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ: ಫೆ.18: ನಾಳೆ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ ಶಾಸಕ ಹರೀಶ್‌ಪೂಂಜ ಭಾಗಿ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

Suddi Udaya
error: Content is protected !!