24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

ಬಳಂಜ: ಕುಣಿತಾ ಭಜನೆಯಲ್ಲಿ ರಾಜ್ಯವ್ಯಾಪ್ತಿ ಪ್ರಸಿದ್ಧಿ ಪಡೆದಿರುವಂತಹ ವಿವಿಧ ಭಜನೆ ಮಂಡಳಿಗಳಲ್ಲಿ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಕೂಡ ಒಂದು. ಹರೀಶ್ ವೈ ಚಂದ್ರಮ‌ ಬಳಂಜ ಇವರ ಸಂಚಾಲಕತ್ವದಲ್ಲಿ ಮುನ್ನಡೆಯುತ್ತಿರುವ ತಂಡ ಧಾರ್ಮಿಕತೆಯ ಭಕ್ತಿಯ ಹೆಜ್ಜೆಯ ಮೂಲಕ ಹೆಸರು ಗಳಿಸಿ ತನ್ನ ಭಕ್ತಿ ಪಯಣದ 230 ನೇ ಕಾರ್ಯಕ್ರಮವನ್ನು ಹಾವೇರಿ ಜಿಲ್ಲೆಯ ಶ್ರೀ ಶಿರಡಿ ಸಾಯಿ ಬಾಬಾ ದೇವಸ್ಥಾನ ರಾಣೆಬೆನ್ನೂರು ಸಾಯಿ ಬಾಬಾ ಉತ್ಸವ ಮೂರ್ತಿಯ ಗುರುಪೂರ್ಣಿಮೆಯ ಕುಣಿತ ಭಜನೆ ಮೆರವಣಿಗೆಯ ಕಾರ್ಯಕ್ರಮವನ್ನು ನೀಡಿ ಎಲ್ಲರ ಮೆಚ್ಚುಗೆ ಗಳಿಸಿ, ಜನರ ಪ್ರಶಂಸೆಗೆ ಪಾತ್ರವಾಗಿದೆ.ಭಜನೆಯೊಂದಿಗೆ ಹಲವಾರು ಸಮಾಜಮುಖಿ ಕೆಲಸ ಕಾರ್ಯ ಸಾಧಿಸಿ ಸಾರ್ವಜನಿಕರಿಂದ ಪ್ರಶಂಸೆ ಗಳಿಸಿದೆ.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ನಿತ್ಯಾನಂದ ಕುಂದಾಪುರ ಅವರು ಬ್ರಹ್ಮಶ್ರೀ ಕುಣಿತ ಭಜನಾ ತಂಡದ ಸಂಚಾಲಕರಾದ ಹರೀಶ್ ವೈ ಚಂದ್ರಮ ಹಾಗೂ ತಂಡದ ಎಲ್ಲ ಸದಸ್ಯರಿಗೂ ಮತ್ತು ಉಪಸ್ಥಿತರಿದ್ದ ತಂಡದ ಪೋಷಕರಿಗೂ ಶಾಲು ಹಾಕಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರು, ಗುರುಗಳು, ಪೋಷಕರು ಪದಾಧಿಕಾರಿಗಳು ,ತಂಡದ ಸದಸ್ಯರು ಹಾಗೂ ಜಯರಾಮ್ ಕುಂದಾಪುರ ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಡಿ.21 :ಕೊಡಿಂಬಾಡಿಯಲ್ಲಿ ಲಲಿತ ಮೆಡಿಕಲ್ ಸ್ಟೋರ್‍ಸ್ ಶುಭಾರಂಭ

Suddi Udaya

ತೆಕ್ಕಾರು: ಬಾಜಾರು ಓಂ ರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ : ವಾಣಿ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಗೆ ಪ್ರಥಮ ಬಹುಮಾನ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

Suddi Udaya
error: Content is protected !!