22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

ಬಳಂಜ: ಕುಣಿತಾ ಭಜನೆಯಲ್ಲಿ ರಾಜ್ಯವ್ಯಾಪ್ತಿ ಪ್ರಸಿದ್ಧಿ ಪಡೆದಿರುವಂತಹ ವಿವಿಧ ಭಜನೆ ಮಂಡಳಿಗಳಲ್ಲಿ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಕೂಡ ಒಂದು. ಹರೀಶ್ ವೈ ಚಂದ್ರಮ‌ ಬಳಂಜ ಇವರ ಸಂಚಾಲಕತ್ವದಲ್ಲಿ ಮುನ್ನಡೆಯುತ್ತಿರುವ ತಂಡ ಧಾರ್ಮಿಕತೆಯ ಭಕ್ತಿಯ ಹೆಜ್ಜೆಯ ಮೂಲಕ ಹೆಸರು ಗಳಿಸಿ ತನ್ನ ಭಕ್ತಿ ಪಯಣದ 230 ನೇ ಕಾರ್ಯಕ್ರಮವನ್ನು ಹಾವೇರಿ ಜಿಲ್ಲೆಯ ಶ್ರೀ ಶಿರಡಿ ಸಾಯಿ ಬಾಬಾ ದೇವಸ್ಥಾನ ರಾಣೆಬೆನ್ನೂರು ಸಾಯಿ ಬಾಬಾ ಉತ್ಸವ ಮೂರ್ತಿಯ ಗುರುಪೂರ್ಣಿಮೆಯ ಕುಣಿತ ಭಜನೆ ಮೆರವಣಿಗೆಯ ಕಾರ್ಯಕ್ರಮವನ್ನು ನೀಡಿ ಎಲ್ಲರ ಮೆಚ್ಚುಗೆ ಗಳಿಸಿ, ಜನರ ಪ್ರಶಂಸೆಗೆ ಪಾತ್ರವಾಗಿದೆ.ಭಜನೆಯೊಂದಿಗೆ ಹಲವಾರು ಸಮಾಜಮುಖಿ ಕೆಲಸ ಕಾರ್ಯ ಸಾಧಿಸಿ ಸಾರ್ವಜನಿಕರಿಂದ ಪ್ರಶಂಸೆ ಗಳಿಸಿದೆ.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ನಿತ್ಯಾನಂದ ಕುಂದಾಪುರ ಅವರು ಬ್ರಹ್ಮಶ್ರೀ ಕುಣಿತ ಭಜನಾ ತಂಡದ ಸಂಚಾಲಕರಾದ ಹರೀಶ್ ವೈ ಚಂದ್ರಮ ಹಾಗೂ ತಂಡದ ಎಲ್ಲ ಸದಸ್ಯರಿಗೂ ಮತ್ತು ಉಪಸ್ಥಿತರಿದ್ದ ತಂಡದ ಪೋಷಕರಿಗೂ ಶಾಲು ಹಾಕಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರು, ಗುರುಗಳು, ಪೋಷಕರು ಪದಾಧಿಕಾರಿಗಳು ,ತಂಡದ ಸದಸ್ಯರು ಹಾಗೂ ಜಯರಾಮ್ ಕುಂದಾಪುರ ಉಪಸ್ಥಿತರಿದ್ದರು.

Related posts

ಬಳಂಜ ಕರ್ಮಂದೊಟ್ಟು ಪರಿಸರದಲ್ಲಿ ಧರೆ ಕುಸಿತ: ಅಪಾಯದಲ್ಲಿ ಕೆಲವು ಮನೆಗಳು, ಬಳಂಜ ಗ್ರಾ.ಪಂ. ನಲ್ಲಿ ತಾತ್ಕಾಲಿಕ ವ್ಯವಸ್ಥೆ, 4 ಕುಟುಂಬಗಳು, 16 ಜನ ಸ್ಥಳಾಂತರ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ಉದ್ಯಮಿ ಶಶಿಧರ ಶೆಟ್ಟಿ ಬರೋಡರಿಂದ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಬಡ ಬಂಟ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು

Suddi Udaya

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ಅರಸಿನಮಕ್ಕಿಯ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ಸ್ಥಾನ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!