23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

ಬಳಂಜ: ಕುಣಿತಾ ಭಜನೆಯಲ್ಲಿ ರಾಜ್ಯವ್ಯಾಪ್ತಿ ಪ್ರಸಿದ್ಧಿ ಪಡೆದಿರುವಂತಹ ವಿವಿಧ ಭಜನೆ ಮಂಡಳಿಗಳಲ್ಲಿ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಕೂಡ ಒಂದು. ಹರೀಶ್ ವೈ ಚಂದ್ರಮ‌ ಬಳಂಜ ಇವರ ಸಂಚಾಲಕತ್ವದಲ್ಲಿ ಮುನ್ನಡೆಯುತ್ತಿರುವ ತಂಡ ಧಾರ್ಮಿಕತೆಯ ಭಕ್ತಿಯ ಹೆಜ್ಜೆಯ ಮೂಲಕ ಹೆಸರು ಗಳಿಸಿ ತನ್ನ ಭಕ್ತಿ ಪಯಣದ 230 ನೇ ಕಾರ್ಯಕ್ರಮವನ್ನು ಹಾವೇರಿ ಜಿಲ್ಲೆಯ ಶ್ರೀ ಶಿರಡಿ ಸಾಯಿ ಬಾಬಾ ದೇವಸ್ಥಾನ ರಾಣೆಬೆನ್ನೂರು ಸಾಯಿ ಬಾಬಾ ಉತ್ಸವ ಮೂರ್ತಿಯ ಗುರುಪೂರ್ಣಿಮೆಯ ಕುಣಿತ ಭಜನೆ ಮೆರವಣಿಗೆಯ ಕಾರ್ಯಕ್ರಮವನ್ನು ನೀಡಿ ಎಲ್ಲರ ಮೆಚ್ಚುಗೆ ಗಳಿಸಿ, ಜನರ ಪ್ರಶಂಸೆಗೆ ಪಾತ್ರವಾಗಿದೆ.ಭಜನೆಯೊಂದಿಗೆ ಹಲವಾರು ಸಮಾಜಮುಖಿ ಕೆಲಸ ಕಾರ್ಯ ಸಾಧಿಸಿ ಸಾರ್ವಜನಿಕರಿಂದ ಪ್ರಶಂಸೆ ಗಳಿಸಿದೆ.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ನಿತ್ಯಾನಂದ ಕುಂದಾಪುರ ಅವರು ಬ್ರಹ್ಮಶ್ರೀ ಕುಣಿತ ಭಜನಾ ತಂಡದ ಸಂಚಾಲಕರಾದ ಹರೀಶ್ ವೈ ಚಂದ್ರಮ ಹಾಗೂ ತಂಡದ ಎಲ್ಲ ಸದಸ್ಯರಿಗೂ ಮತ್ತು ಉಪಸ್ಥಿತರಿದ್ದ ತಂಡದ ಪೋಷಕರಿಗೂ ಶಾಲು ಹಾಕಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರು, ಗುರುಗಳು, ಪೋಷಕರು ಪದಾಧಿಕಾರಿಗಳು ,ತಂಡದ ಸದಸ್ಯರು ಹಾಗೂ ಜಯರಾಮ್ ಕುಂದಾಪುರ ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಮಾಯ ಮಹಾದೇವ ದೇವಸ್ಥಾನದ ‘ಮಹಾಪ್ರಸಾದ’ ಕೈಪಿಡಿ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸರಸ್ವತಿ, ಉಪಾಧ್ಯಕ್ಷರಾಗಿ ಶಾಲಿನಿ ಅವಿರೋಧವಾಗಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ನೈತಿಕ ಮೌಲ್ಯಧಾರಿತ ಪುಸ್ತಕ ಲೋಕಾರ್ಪಣೆ,ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ

Suddi Udaya

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆರಂಭ

Suddi Udaya
error: Content is protected !!