23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

ಸೋಣಂದೂರು: ಪಣಕಜೆಯ ಅರ್ಕಜೆ ಎಂಬಲ್ಲಿ ಶ್ರೀಮತಿ ಕುಸುಮಾವತಿ ಎಂಬುವವರ ಮನೆಗೆ ಗುಡ್ಡ ಕುಸಿದು ಮನೆಯ ಮುಂಭಾಗ ಮಣ್ಣಿನಿಂದ ಸಂಪೂರ್ಣ ಮುಚ್ಚಿ ಹೋಗಿತ್ತು.

ವಿಷಯ ತಿಳಿದು ತಕ್ಷಣ ಸ್ಪಂದಿಸಿದ ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರು ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡು ಸಹಕರಿಸಿದರು.

ದೊಡ್ಡ ಮಟ್ಟದ ಮಣ್ಣು ಕುಸಿದು ಭಾರೀ ಪ್ರಮಾಣದ ಮಣ್ಣು ತುಂಬಿದ್ದು, ಸಂಪೂರ್ಣ ತೆರವು ಅಸಾಧ್ಯ ವಾಗಿರುತ್ತದೆ. ತಾತ್ಕಾಲಿಕವಾಗಿ ಮುಂಭಾಗದ ಮಣ್ಣು ತೆರವುಗೊಳಿಸಲಾಯಿತು.

ವಲಯ ಮೇಲ್ವಿಚಾರಕರಾದ ಶ್ರೀಮತಿ ಯಶೋಧರವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೇವಾಪ್ರತಿನಿಧಿ ಶ್ರೀಮತಿ ಜಾನಕಿ, ಮಡಂತ್ಯಾರು ವಲಯ ಶೌರ್ಯ ಸಂಯೋಜಕಿ ಶ್ರೀಮತಿ ಹರಿಣಾಕ್ಷಿ, ಘಟಕ ಪ್ರತಿನಿಧಿ ಬಾಲಕೃಷ್ಣ ಹಾರಬೆ,ಸ್ವಯಂ ಸೇವಕರಾದ ಭರತ್ ಕುಮಾರ್, ದಯಾನಂದ ಹಚ್ಚಬೆ, ಯೋಗೀಶ್ ಕೊಡ್ಲಕ್ಕೆ, ಶ್ರೀಮತಿ ಶೋಭಾ, ಬೇಬಿ ವಡ್ಡ, ಸತೀಶ್ ಆಚಾರ್ಯ ಕಾರ್ಯಾಚರಣೆಯಲ್ಲಿ ಸಹಕರಿಸಿದರು.

Related posts

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ:

Suddi Udaya

ಕಲ್ಪತರು ನರ್ಸಿಂಗ್ ಸ್ಕೂಲ್ ನಲ್ಲಿ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ

Suddi Udaya

ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಮಂಗಳೂರು ವಿಭಾಗದ ವತಿಯಿಂದ ಪರಿಸರ ಪ್ರೇಮಿ ಸಚಿನ್ ಭಿಡೆ ಮುಂಡಾಜೆ ರವರಿಗೆ ಸನ್ಮಾನ

Suddi Udaya

ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

Suddi Udaya

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya
error: Content is protected !!