July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

ಸೋಣಂದೂರು: ಪಣಕಜೆಯ ಅರ್ಕಜೆ ಎಂಬಲ್ಲಿ ಶ್ರೀಮತಿ ಕುಸುಮಾವತಿ ಎಂಬುವವರ ಮನೆಗೆ ಗುಡ್ಡ ಕುಸಿದು ಮನೆಯ ಮುಂಭಾಗ ಮಣ್ಣಿನಿಂದ ಸಂಪೂರ್ಣ ಮುಚ್ಚಿ ಹೋಗಿತ್ತು.

ವಿಷಯ ತಿಳಿದು ತಕ್ಷಣ ಸ್ಪಂದಿಸಿದ ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರು ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡು ಸಹಕರಿಸಿದರು.

ದೊಡ್ಡ ಮಟ್ಟದ ಮಣ್ಣು ಕುಸಿದು ಭಾರೀ ಪ್ರಮಾಣದ ಮಣ್ಣು ತುಂಬಿದ್ದು, ಸಂಪೂರ್ಣ ತೆರವು ಅಸಾಧ್ಯ ವಾಗಿರುತ್ತದೆ. ತಾತ್ಕಾಲಿಕವಾಗಿ ಮುಂಭಾಗದ ಮಣ್ಣು ತೆರವುಗೊಳಿಸಲಾಯಿತು.

ವಲಯ ಮೇಲ್ವಿಚಾರಕರಾದ ಶ್ರೀಮತಿ ಯಶೋಧರವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೇವಾಪ್ರತಿನಿಧಿ ಶ್ರೀಮತಿ ಜಾನಕಿ, ಮಡಂತ್ಯಾರು ವಲಯ ಶೌರ್ಯ ಸಂಯೋಜಕಿ ಶ್ರೀಮತಿ ಹರಿಣಾಕ್ಷಿ, ಘಟಕ ಪ್ರತಿನಿಧಿ ಬಾಲಕೃಷ್ಣ ಹಾರಬೆ,ಸ್ವಯಂ ಸೇವಕರಾದ ಭರತ್ ಕುಮಾರ್, ದಯಾನಂದ ಹಚ್ಚಬೆ, ಯೋಗೀಶ್ ಕೊಡ್ಲಕ್ಕೆ, ಶ್ರೀಮತಿ ಶೋಭಾ, ಬೇಬಿ ವಡ್ಡ, ಸತೀಶ್ ಆಚಾರ್ಯ ಕಾರ್ಯಾಚರಣೆಯಲ್ಲಿ ಸಹಕರಿಸಿದರು.

Related posts

ಭಾರೀ ಮಳೆಗೆ ಕಳೆಂಜ ಕುಕ್ಕಾಜೆಯಲ್ಲಿ ಮನೆಯ ಹಿಂಬದಿಯ ಗೋಡೆ ಕುಸಿತ

Suddi Udaya

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

Suddi Udaya

ಮುಂಡಾಜೆ ಶಿಕ್ಷಣ ಸಂಸ್ಥೆಯ ವೆಬ್ ಸೈಟ್ ಉದ್ಘಾಟನೆ ಮತ್ತು ದೀಪ ಪ್ರದಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಿಶೇಷಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!