July 23, 2026
ಜಿಲ್ಲಾ ಸುದ್ದಿ

ಬೆಳ್ತಂಗಡಿ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ: ಸುರಕ್ಷತೆಯನ್ನು ಅಳವಡಿಸಿ ಮನೆ ನಿರ್ಮಾಣಕ್ಕೆ ಜಿಲ್ಲಾಧಿಕಾರಿ ಸೂಚನೆ

ಬೆಳ್ತಂಗಡಿ: ತಾಲೂಕಿನಲ್ಲ ಅಧಿಕ ಮಳೆಯಾಗಿದ್ದು ಅಪಾರ ಹಾನಿಯಾಗಿದೆ. ಇದರ ಬಗ್ಗೆ ಪರಿಶೀಲನೆ ನಡೆಸಿ ತುರ್ತು ಕಾಮಗಾರಿಗಳ ವರದಿಯನ್ನು ಶೀಘ್ರವಾಗಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮುಂದೆ ಮನೆ ನಿರ್ಮಾಣದ ವೇಳೆ ಸುರಕ್ಷತೆಯನ್ನು ಅಳವಡಿಸಿ ಮನೆಗಳನ್ನು ನಿರ್ಮಿಸಬೇಕು, ಪರವಾನಿಗೆ ನೀಡುವಾಗ ಕೂಡಾ ಸುರಕ್ಷಿತಾ ನಿಯಮಗಳನ್ನು ಪಾಲಿಸಲು ಆದೇಶ ನೀಡಲಾಗುತ್ತದೆ. ಇಲ್ಲವಾದಲ್ಲಿ ಕೇರಳ ವಯನಾಡ್ ಸ್ಥಿತಿ ಬರಹುದು ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.

ಅವರು ಆ.1ರಂದು ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಮಾಧ್ಯಮದವರ ಜೊತೆ ಮಾತನಾಡಿದರು. ಬುದವಾರ ರಾತ್ರಿ ತಾಲೂಕಿನಲ್ಲಿ ಪ್ರಮುಖವಾಗಿ ನಾಲ್ಕು ಕಡೆ ರಸ್ತೆ ಸಂಚಾರಕ್ಕೆ ತಡೆಯಾಗಿದೆ. ಹಲವು ಕುಟುಂಬಗಳನ್ನು ಸ್ತಳಾಂತರಿಸಲಾಗಿದೆ . ಸಂಪೂರ್ಣ ಹಾನಿಯಾದ ಮನೆಗಳಿಗೆ ಸರಕಾರದ ನಿಯಮದಂತೆ ರೂ. 1.25 ಲಕ್ಷ ಪರಿಹಾರ ನೀಡಲಾಗುವುದು. ಉಳಿದಂತೆ ಹಾನಿಯನ್ನು ಪರಿಗಣಿಸಿ ಪರಿಹಾರ ನೀಡಲಾಗುವುದು ಎಂದರು. ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ ಅನಾಹುವಾಗದಂತೆ ತಡೆಯಲು,ಮಕ್ಕಳ ಮೇಲಿನ ಕಾಳಜಿಯಿಂದ ರಜೆ ನಿಡಲಾಗುತ್ತದೆ. ಪೋಷಕರು ಕೂಡ ಮಕ್ಕಳನ್ನು ಮಳೆ ಸಂದರ್ಭದಲ್ಲಿ ಹೊರಗೆ ಕಳಿಸಬಾರದು ಎಂದರು.
ತಾಲೂಕಿನ ಮದ್ದಡ್ಕ, ಪಡಂಗಡಿ, ಪೊಯ್ಯೆಗುಡ್ಡೆ ಸಂಪರ್ಕ ರಸ್ತೆ ಕುದ್ರೆಂಜ ಎಂಬಲ್ಲಿ ಸಂಪರ್ಕ ರಸ್ತೆ ಕುಸಿದಿದ್ದು ಇಲ್ಲಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರು ಇಂತಹ ಅಪಾಯಕಾರಿ ರಸ್ತೆಗಳಲ್ಲಿ ಪ್ರಯಾಣಿಸದಂತೆ ಮನವಿ ಮಾಡಿದರು. ಸಂಬಂದ ಪಟ್ಟ ಅಧಿಕಾರಿಗಳಿಗೆ ತುರ್ತು ಕಾಮಗಾರಿ ನಡೆಸಲು ಅಂದಾಜು ವೆಚ್ಚ ಮಾಡಿ ವರದಿ ನೀಡುವಂತೆ ಸೂಚಿಸಿದರು. ’
ಬಳಿಕ ಗುರುವಾಯನಕೆರೆ ಬಂಟರ ಭವನ, ಮಸೀದಿ, ಉಜಿರೆ, ಕಲ್ಮಂಜ, ಚಾರ್ಮಾಡಿ, ಸವಣಾಲು,ಅಳದಂಗಡಿ, ವೇಣೂರು, ಮರೋಡಿ, ಹೊಸಂಗಡಿ ಭಾಗಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ತಹಶೀಲ್ದಾರ್ ಪೃಥ್ವಿಸಾನಿಕಂ, ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್, ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ, ಸಹಾಯಕ ಕಾರ್ಯಪಾಲಕ ಅಭಿಯಂತರ ನಿತಿನ್ ನಾಯ್ಕ್, ನ.ಪಂ ಮುಖ್ಯಾಧಿಕಾರಿ ರಾಜೇಶ್, ಬಿಜೆಪಿ ಪ್ರದಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ನ.ಪಂ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್, ಪಡಂಗಡಿ ಗ್ರಾ ಪಂ ಅದ್ಯಕ್ಷೆ ಮೀನಾಕ್ಷಿ, ಉಪಾದ್ಯಕ್ಷ ಸಂತೋಷ್ ಕುಮಾರ್, ಸ್ಥಳೀಯ ಗ್ರಾ ಪಂ ಅದ್ಯಕ್ಷರುಗಳು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು,ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

Suddi Udaya

ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿಗೆ ಜೀವಾವಧಿ ಶಿಕ್ಷೆ : ಶ್ರಮಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆ

Suddi Udaya

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya

ದ.ಕ ಜಿಲ್ಲಾ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆ ಪ್ರಾಥಮಿಕ ಹಂತದ ತರಬೇತಿ ಕಾರ್ಯಾಗಾರ

Suddi Udaya

ನಮ್ಮ ಟಿವಿಯ ‘ಬಲೆ ಚಾತುರ್ಪು ತೋಜಾಲೆ’ ರೀಯಾಲಿಟಿ ಶೋ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ ಸ್ಥಾನ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

Suddi Udaya
error: Content is protected !!