September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು: ಕರಿಮಣೇಲು ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವೇಣೂರು ವಲಯದ ಕರಿಮಣೇಲು ಕಾರ್ಯ ಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನೂ ಒಕ್ಕೂಟದ ಅಧ್ಯಕ್ಷ ವಿಲಿಯಂ ವಿನ್ಸೆಂಟ್ ರೇಗೊರವರು ಉದ್ಘಾಟಿಸಿದರು.
ಬೆಳ್ತಂಗಡಿ ಕ್ಷೇತ್ರ ಶಿಕ್ಷಣ ಆರೋಗ್ಯ ಅಧಿಕಾರಿ ಆಮ್ಮಿ ಇವರು ಕೇಂದ್ರದ ಸದಸ್ಯರಿಗೆ ಪೌಷ್ಟಿಕ ಆಹಾರದ ಬಗ್ಗೆ ಹಾಗೂ ಮಹಿಳೆಯರಲ್ಲಿ ಬರುವಂತಹ ಕೆಲವೊಂದು ಸಮಸ್ಯೆ ಬಗ್ಗೆ ಮಾಹಿತಿ ನೀಡಿದರು.

ತಾಲೂಕು ಜ್ಞಾನ ವಿಕಾಸ ಸಮಣ್ವಯ ಅಧಿಕಾರಿ ಪೂರ್ಣಿಮಾ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕರು ಶಾಲಿನಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಮಾಜಿ ಅಧ್ಯಕ್ಷರು ದೋಗು ನಾಯಕ್ ಸದಸ್ಯರಿಗೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಕೇಂದ್ರದ ಸದಸ್ಯರು ಅಟಿ ತಿಂಗಳಲ್ಲಿ ಸಿಗುವಂತಹ ಪೌಷ್ಟಿಕ ಆಹಾರ ಪದಾರ್ಥಗಳನ್ನು ಮಾಡಿ ತಂದಿದ್ದರು. ಆಟೋಟ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು ಇದರಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಂಯೋಜಕಿ ಶುಭಲತ ಕಾರ್ಯಕ್ರಮ ನಿರೂಪಿಸಿ, ಸೇವಾ ಪ್ರತಿನಿಧಿ ಶೋಭಾ ಸ್ವಾಗತಿಸಿದರು. ಕಾರ್ಯದರ್ಶಿ ಸಚಿತ ಧನ್ಯವಾದವಿತ್ತರು.

Related posts

ಬೆಳಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಗ್ರಾಮ ಸಮಿತಿಯ ವಾರ್ಷಿಕ ಕ್ರೀಡಾಕೂಟ

Suddi Udaya

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಪಡಂಗಡಿ: 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿ: ಮರ ಧಾರಾಶಾಹಿ-ಸಂಚಾರ ಸ್ಥಗಿತ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!