September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

ಸೋಣಂದೂರು: ಪಣಕಜೆಯ ಅರ್ಕಜೆ ಎಂಬಲ್ಲಿ ಶ್ರೀಮತಿ ಕುಸುಮಾವತಿ ಎಂಬುವವರ ಮನೆಗೆ ಗುಡ್ಡ ಕುಸಿದು ಮನೆಯ ಮುಂಭಾಗ ಮಣ್ಣಿನಿಂದ ಸಂಪೂರ್ಣ ಮುಚ್ಚಿ ಹೋಗಿತ್ತು.

ವಿಷಯ ತಿಳಿದು ತಕ್ಷಣ ಸ್ಪಂದಿಸಿದ ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರು ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡು ಸಹಕರಿಸಿದರು.

ದೊಡ್ಡ ಮಟ್ಟದ ಮಣ್ಣು ಕುಸಿದು ಭಾರೀ ಪ್ರಮಾಣದ ಮಣ್ಣು ತುಂಬಿದ್ದು, ಸಂಪೂರ್ಣ ತೆರವು ಅಸಾಧ್ಯ ವಾಗಿರುತ್ತದೆ. ತಾತ್ಕಾಲಿಕವಾಗಿ ಮುಂಭಾಗದ ಮಣ್ಣು ತೆರವುಗೊಳಿಸಲಾಯಿತು.

ವಲಯ ಮೇಲ್ವಿಚಾರಕರಾದ ಶ್ರೀಮತಿ ಯಶೋಧರವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೇವಾಪ್ರತಿನಿಧಿ ಶ್ರೀಮತಿ ಜಾನಕಿ, ಮಡಂತ್ಯಾರು ವಲಯ ಶೌರ್ಯ ಸಂಯೋಜಕಿ ಶ್ರೀಮತಿ ಹರಿಣಾಕ್ಷಿ, ಘಟಕ ಪ್ರತಿನಿಧಿ ಬಾಲಕೃಷ್ಣ ಹಾರಬೆ,ಸ್ವಯಂ ಸೇವಕರಾದ ಭರತ್ ಕುಮಾರ್, ದಯಾನಂದ ಹಚ್ಚಬೆ, ಯೋಗೀಶ್ ಕೊಡ್ಲಕ್ಕೆ, ಶ್ರೀಮತಿ ಶೋಭಾ, ಬೇಬಿ ವಡ್ಡ, ಸತೀಶ್ ಆಚಾರ್ಯ ಕಾರ್ಯಾಚರಣೆಯಲ್ಲಿ ಸಹಕರಿಸಿದರು.

Related posts

ಬೆಳ್ತಂಗಡಿ: ಗೊಲ್ಲ(ಯಾದವ) ಸಮಾಜ ಸೇವಾ ಸಂಘ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಳೆಂಜ: ರಾಮಣ್ಣ ಗೌಡ ಬರೆಂಗಾಯ ನಿಧನ

Suddi Udaya

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya

ನೆರಿಯದಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ದಾಳಿ : ಹಿಟಾಚಿ, ಟಿಪ್ಪರ್, ಟಾಕ್ಟರ್ ವಶಕ್ಕೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

Suddi Udaya
error: Content is protected !!