25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

ಸೋಣಂದೂರು: ಪಣಕಜೆಯ ಅರ್ಕಜೆ ಎಂಬಲ್ಲಿ ಶ್ರೀಮತಿ ಕುಸುಮಾವತಿ ಎಂಬುವವರ ಮನೆಗೆ ಗುಡ್ಡ ಕುಸಿದು ಮನೆಯ ಮುಂಭಾಗ ಮಣ್ಣಿನಿಂದ ಸಂಪೂರ್ಣ ಮುಚ್ಚಿ ಹೋಗಿತ್ತು.

ವಿಷಯ ತಿಳಿದು ತಕ್ಷಣ ಸ್ಪಂದಿಸಿದ ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರು ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡು ಸಹಕರಿಸಿದರು.

ದೊಡ್ಡ ಮಟ್ಟದ ಮಣ್ಣು ಕುಸಿದು ಭಾರೀ ಪ್ರಮಾಣದ ಮಣ್ಣು ತುಂಬಿದ್ದು, ಸಂಪೂರ್ಣ ತೆರವು ಅಸಾಧ್ಯ ವಾಗಿರುತ್ತದೆ. ತಾತ್ಕಾಲಿಕವಾಗಿ ಮುಂಭಾಗದ ಮಣ್ಣು ತೆರವುಗೊಳಿಸಲಾಯಿತು.

ವಲಯ ಮೇಲ್ವಿಚಾರಕರಾದ ಶ್ರೀಮತಿ ಯಶೋಧರವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೇವಾಪ್ರತಿನಿಧಿ ಶ್ರೀಮತಿ ಜಾನಕಿ, ಮಡಂತ್ಯಾರು ವಲಯ ಶೌರ್ಯ ಸಂಯೋಜಕಿ ಶ್ರೀಮತಿ ಹರಿಣಾಕ್ಷಿ, ಘಟಕ ಪ್ರತಿನಿಧಿ ಬಾಲಕೃಷ್ಣ ಹಾರಬೆ,ಸ್ವಯಂ ಸೇವಕರಾದ ಭರತ್ ಕುಮಾರ್, ದಯಾನಂದ ಹಚ್ಚಬೆ, ಯೋಗೀಶ್ ಕೊಡ್ಲಕ್ಕೆ, ಶ್ರೀಮತಿ ಶೋಭಾ, ಬೇಬಿ ವಡ್ಡ, ಸತೀಶ್ ಆಚಾರ್ಯ ಕಾರ್ಯಾಚರಣೆಯಲ್ಲಿ ಸಹಕರಿಸಿದರು.

Related posts

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ರಾಶಿ ಪೂಜೆ

Suddi Udaya

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಮೇ 26: ವಿದ್ಯುತ್ ನಿಲುಗಡೆ

Suddi Udaya

ಅಂತರ್ ಕಾಲೇಜು “ತುಳು ಐಸಿರೇ- 2023” : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya
error: Content is protected !!