22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಎಚ್ಚರಿಕೆಯಿಂದ ಇರುವಂತೆ ತಾಲೂಕಿನ ಜನತೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮನವಿ ಮಾಡಿದ್ದಾರೆ.

ಜಿಲ್ಲೆಯ ಎಲ್ಲಾ ಜೀವ ನದಿಗಳು ಉಕ್ಕಿ ಹರಿಯುತ್ತಿದ್ದು ಜಿಲ್ಲೆಯನ್ನು ಸಂಪರ್ಕಿಸುವ ಎಲ್ಲಾ ಪ್ರಮುಖ ರಸ್ತೆಗಳಲ್ಲಿಯೂ ಭೂಕುಸಿತ ಹಾಗೂ ಮರಗಳು ರಸ್ತೆಗೆ ಉರುಳುತ್ತಿರುವ ಘಟನೆಗಳು ಈಗಾಗಲೇ ನಿಮ್ಮೆಲ್ಲರ ಗಮನಕ್ಕೂ ಬಂದಿರುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಅಗತ್ಯ ಸಂಚಾರ ನಡೆಸುವ ಸಂದರ್ಭ ಅತ್ಯಂತ ಹೆಚ್ಚಿನ ಕಾಳಜಿಯನ್ನು ವಹಿಸುವಂತೆ ವಿನಂತಿಸುತ್ತ. ಬೆಳ್ತಂಗಡಿ ತಾಲೂಕಿನಲ್ಲಿ ನದಿ ಪಾತ್ರಗಳಲ್ಲಿ ವಾಸಿಸುತ್ತಿರುವ ಎಲ್ಲಾ ಜನರು ಕೂಡ ತಮ್ಮ ರಕ್ಷಣೆ ಹಾಗೂ ಜಾನುವಾರುಗಳ ರಕ್ಷಣೆಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳನ್ನು ವಹಿಸಿಕೊಂಡು ಯಾವುದೇ ರೀತಿಯ ಅಪಾಯದ ಮುನ್ಸೂಚನೆ ದೊರೆತ ತಕ್ಷಣ ನಮ್ಮ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಹಾಗೂ’ ಶ್ರಮಿಕ’ ತಂಡ ನಿಮ್ಮ ಸಹಾಯಕ್ಕೆ ಸನ್ನದ್ಧವಾಗಿದ್ದು ನೀಡಲಾದ ತುರ್ತು ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ನೀಡಬಹುದು. ಹಗಲು ರಾತ್ರಿಯೆನ್ನದೆ ಯಾವುದೇ ಸಮಯದಲ್ಲಾದರೂ ಸಹಾಯಕ್ಕೆ ತಂಡ ಸದಾ ಸಿದ್ದವಾಗಿದೆ. ಎಂದು ಮನವಿಯನ್ನು ಮಾಡಿಕೊಂಡಿದ್ದಾರೆ.

Related posts

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ರೂ.3ಕೋಟಿ ಅನುದಾನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಸೋಣಂದೂರು: ಜಿಲ್ಲಾಮಟ್ಟದ ಪುರುಷರ 55 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ ಸಂಸ್ಕಾರ ಭಾರತಿ ಮತ್ತು ಹನುಮೋತ್ಸವ ಸಮಿತಿ ಅಳದಂಗಡಿ ವತಿಯಿಂದ ಹನುಮೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!