ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆಗೆ ಹಾನಿಗೊಳಗಾದ ಪ್ರದೇಶಕ್ಕೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ

Suddi Udaya

ಬೆಳ್ತಂಗಡಿ :ಹಲವು ದಿನಗಳಿಂದ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಹಾನಿಗೊಳಗಾಗಿದ್ದ ಪ್ರದೇಶಗಳಾದ ಸೋಣಂದೂರು ಗ್ರಾಮದ ಅರ್ಕಜೆ, ಓಡಿಲ್ನಾಳ ಗ್ರಾಮದ ಬಟ್ಟೆಮಾರ್, ಪಡಂಗಡಿ, ಸವಣಾಲು ಗ್ರಾಮದ ಬಾಡಡ್ಕ, ಲಾಯಿಲ ಗ್ರಾಮದ ಕತ್ಪಾಜೆ, ಕುತ್ಲೂರು ಗ್ರಾಮದ ಅತ್ರಿಜಾಲು, ಮರೋಡಿ ಗ್ರಾಮದ ದೇರಾಜೆಬೆಟ್ಟ ಹಾಗೂ ಮೇಲಂತಬೆಟ್ಟುವಿನ ಹಲವು ಕಡೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ ನೀಡಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ. ಪಾರೆಂಕಿ, ಜಯಾನಂದ ಗೌಡ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಕಂದಾಯ ಇಲಾಖಾ ಅಧಿಕಾರಿಗಳು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು.

Leave a Comment

error: Content is protected !!