23.5 C
ಪುತ್ತೂರು, ಬೆಳ್ತಂಗಡಿ
June 8, 2026
ಜಿಲ್ಲಾ ಸುದ್ದಿ

ಬೆಳ್ತಂಗಡಿ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ: ಸುರಕ್ಷತೆಯನ್ನು ಅಳವಡಿಸಿ ಮನೆ ನಿರ್ಮಾಣಕ್ಕೆ ಜಿಲ್ಲಾಧಿಕಾರಿ ಸೂಚನೆ

ಬೆಳ್ತಂಗಡಿ: ತಾಲೂಕಿನಲ್ಲ ಅಧಿಕ ಮಳೆಯಾಗಿದ್ದು ಅಪಾರ ಹಾನಿಯಾಗಿದೆ. ಇದರ ಬಗ್ಗೆ ಪರಿಶೀಲನೆ ನಡೆಸಿ ತುರ್ತು ಕಾಮಗಾರಿಗಳ ವರದಿಯನ್ನು ಶೀಘ್ರವಾಗಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮುಂದೆ ಮನೆ ನಿರ್ಮಾಣದ ವೇಳೆ ಸುರಕ್ಷತೆಯನ್ನು ಅಳವಡಿಸಿ ಮನೆಗಳನ್ನು ನಿರ್ಮಿಸಬೇಕು, ಪರವಾನಿಗೆ ನೀಡುವಾಗ ಕೂಡಾ ಸುರಕ್ಷಿತಾ ನಿಯಮಗಳನ್ನು ಪಾಲಿಸಲು ಆದೇಶ ನೀಡಲಾಗುತ್ತದೆ. ಇಲ್ಲವಾದಲ್ಲಿ ಕೇರಳ ವಯನಾಡ್ ಸ್ಥಿತಿ ಬರಹುದು ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.

ಅವರು ಆ.1ರಂದು ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಮಾಧ್ಯಮದವರ ಜೊತೆ ಮಾತನಾಡಿದರು. ಬುದವಾರ ರಾತ್ರಿ ತಾಲೂಕಿನಲ್ಲಿ ಪ್ರಮುಖವಾಗಿ ನಾಲ್ಕು ಕಡೆ ರಸ್ತೆ ಸಂಚಾರಕ್ಕೆ ತಡೆಯಾಗಿದೆ. ಹಲವು ಕುಟುಂಬಗಳನ್ನು ಸ್ತಳಾಂತರಿಸಲಾಗಿದೆ . ಸಂಪೂರ್ಣ ಹಾನಿಯಾದ ಮನೆಗಳಿಗೆ ಸರಕಾರದ ನಿಯಮದಂತೆ ರೂ. 1.25 ಲಕ್ಷ ಪರಿಹಾರ ನೀಡಲಾಗುವುದು. ಉಳಿದಂತೆ ಹಾನಿಯನ್ನು ಪರಿಗಣಿಸಿ ಪರಿಹಾರ ನೀಡಲಾಗುವುದು ಎಂದರು. ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ ಅನಾಹುವಾಗದಂತೆ ತಡೆಯಲು,ಮಕ್ಕಳ ಮೇಲಿನ ಕಾಳಜಿಯಿಂದ ರಜೆ ನಿಡಲಾಗುತ್ತದೆ. ಪೋಷಕರು ಕೂಡ ಮಕ್ಕಳನ್ನು ಮಳೆ ಸಂದರ್ಭದಲ್ಲಿ ಹೊರಗೆ ಕಳಿಸಬಾರದು ಎಂದರು.
ತಾಲೂಕಿನ ಮದ್ದಡ್ಕ, ಪಡಂಗಡಿ, ಪೊಯ್ಯೆಗುಡ್ಡೆ ಸಂಪರ್ಕ ರಸ್ತೆ ಕುದ್ರೆಂಜ ಎಂಬಲ್ಲಿ ಸಂಪರ್ಕ ರಸ್ತೆ ಕುಸಿದಿದ್ದು ಇಲ್ಲಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರು ಇಂತಹ ಅಪಾಯಕಾರಿ ರಸ್ತೆಗಳಲ್ಲಿ ಪ್ರಯಾಣಿಸದಂತೆ ಮನವಿ ಮಾಡಿದರು. ಸಂಬಂದ ಪಟ್ಟ ಅಧಿಕಾರಿಗಳಿಗೆ ತುರ್ತು ಕಾಮಗಾರಿ ನಡೆಸಲು ಅಂದಾಜು ವೆಚ್ಚ ಮಾಡಿ ವರದಿ ನೀಡುವಂತೆ ಸೂಚಿಸಿದರು. ’
ಬಳಿಕ ಗುರುವಾಯನಕೆರೆ ಬಂಟರ ಭವನ, ಮಸೀದಿ, ಉಜಿರೆ, ಕಲ್ಮಂಜ, ಚಾರ್ಮಾಡಿ, ಸವಣಾಲು,ಅಳದಂಗಡಿ, ವೇಣೂರು, ಮರೋಡಿ, ಹೊಸಂಗಡಿ ಭಾಗಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ತಹಶೀಲ್ದಾರ್ ಪೃಥ್ವಿಸಾನಿಕಂ, ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್, ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ, ಸಹಾಯಕ ಕಾರ್ಯಪಾಲಕ ಅಭಿಯಂತರ ನಿತಿನ್ ನಾಯ್ಕ್, ನ.ಪಂ ಮುಖ್ಯಾಧಿಕಾರಿ ರಾಜೇಶ್, ಬಿಜೆಪಿ ಪ್ರದಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ನ.ಪಂ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್, ಪಡಂಗಡಿ ಗ್ರಾ ಪಂ ಅದ್ಯಕ್ಷೆ ಮೀನಾಕ್ಷಿ, ಉಪಾದ್ಯಕ್ಷ ಸಂತೋಷ್ ಕುಮಾರ್, ಸ್ಥಳೀಯ ಗ್ರಾ ಪಂ ಅದ್ಯಕ್ಷರುಗಳು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು,ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತನಿಖೆ ಪೂರ್ಣಗೊಂಡಿಲ್ಲ: ಪ್ರಣವ್ ಮೊಹಂತಿ

Suddi Udaya

ಆಕರ್ಷ ಗೆ ಪಿ. ಎಚ್. ಡಿ ಪ್ರದಾನ

Suddi Udaya

ಜಿಲ್ಲೆಯಲ್ಲಿ ವ್ಯಾಪಕಮಳೆಯಾಗುತ್ತಿರುವ ಹಿನ್ನೆಲೆ:ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ, ಅನುದಾನಿತ ಶಾಲೆಗಳಿಗೆ ನಾಳೆ ರಜೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮ ಜಾಗೃತಿ ಸಮಾವೇಶ

Suddi Udaya

ಅಪರಿಚಿತ ವ್ಯಕ್ತಿ ಮೃತ್ಯು: ವಿಳಾಸ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರ ಮನವಿ

Suddi Udaya

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿಂದೂ ಸಂಘಟನೆಗಳಿಂದ ಇಂದು(ಮೇ 2) ದ.ಕ ಜಿಲ್ಲೆ ಬಂದ್ ಗೆ ಕರೆ

Suddi Udaya
error: Content is protected !!