ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya

ಅಂಡಿಂಜೆ: ಕೊಕ್ರಾಡಿ, ಅತ್ರಿಜಾಲು ಮೂಲಕ ಕುತ್ಲೂರು ಸಂಪರ್ಕಿಸುವ ರಸ್ತೆ ಅತ್ರಿಜಾಲು ದೇವಸ್ಥಾನದ ಹತ್ತಿರದಲ್ಲಿ ಸಣ್ಣ ಸೇತುವೆ ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಘಟನೆ ಅಂಡಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.

ಕಳೆದ ರಾತ್ರಿ ಭಾರಿ ಮಳೆಯಾದ ಪರಿಣಾಮ ನೀರಿನ ರಭಸಕ್ಕೆ ಸೇತುವೆ ಬಿದ್ದು ಕೊಚ್ಚಿ ಹೋಗಿದ್ದು ಸಂಪರ್ಕ ಕಡಿತಗೊಂಡಿದೆ ಎಂದು ಅಂಡಿಂಜೆ ಗ್ರಾಮ ಪಂಚಾಯತ್ ಅಧ್ಯಕ್ಷ ನಿತಿನ್ ಪೂಜಾರಿ ಮಾಹಿತಿ ನೀಡಿದ್ದಾರೆ‌.

ಘಟನಾ ಸ್ಥಳಕ್ಕೆ ಅಂಡಿಂಜೆ ಗ್ರಾ.ಪಂ ಅಧ್ಯಕ್ಷ ನಿತಿನ್ ಪೂಜಾರಿ, ಪಿಡಿಓ ರಾಘವೇಂದ್ರ ಪಾಟೀಲ್,ಸದಸ್ಯರಾದ ಜಯಂತಿ, ಶೋಭಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

error: Content is protected !!