ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ: ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ(ರಿ.) ಹಳೆಕೋಟೆ,, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಬೆಳ್ತಂಗಡಿ, ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಇವುಗಳ ಸಹಯೋಗದಲ್ಲಿ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಇವರ ನೇತೃತ್ವದಲ್ಲಿ ಆ. 18ರಂದು ವಾಣಿ ಶಿಕ್ಷಣ ಸಂಸ್ಥೆಗಳ ಹಿಂಭಾಗದ ಗದ್ದೆಯಲ್ಲಿ ನಡೆಯಲಿರುವ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿ ತಾಲೂಕು ಸಂಘದ ಅಧ್ಯಕ್ಷರಾದ ಕುಶಾಲಪ್ಪ ಗೌಡ ಪೂವಾಜೆ ಮತ್ತು ಗೌರವ ಅಧ್ಯಕ್ಷರಾದ ಹೆಚ್. ಪದ್ಮ ಗೌಡ ರವರ ಮೂಲಕ ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಬಿಡುಗಡೆ ಮಾಡಲಾಯಿತು.


ಈ ಸಂದರ್ಭದಲ್ಲಿ ತಾಲೂಕು ಸಂಘದ ಕಾರ್ಯದರ್ಶಿ ಗಣೇಶ್ ಗೌಡ ಕಡಿರುದ್ಯಾವರ, ಉಪಾಧ್ಯಕ್ಷರುಗಳಾದ ನಾರಾಯಣ ಗೌಡ ದೇವಸ್ಯ ಮತ್ತು ಧರ್ಣಪ್ಪ ಗೌಡ ಬಂದಾರು, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು, ಕೋಶಾಧಿಕಾರಿ ಯುವರಾಜ್ ಅನಾರು, ಜತೆ ಕಾರ್ಯದರ್ಶಿ ಶ್ರೀನಾಥ್ ನಡ, ಸದಸ್ಯರುಗಳಾದ ಗೋಪಾಲಕೃಷ್ಣ ಗುಲ್ಲೋಡಿ, ಬಾಲಕೃಷ್ಣ ಬಿರ್ಮೊಟ್ಟು, ವಿಜಯ ಕುಮಾರ್ ನ್ಯಾಯತರ್ಪು, ಶ್ರೀಮತಿ ಉಷಾದೇವಿ ಉಜಿರೆ, ಭವಾನಿ ಕಾಂತಪ್ಪ ಗೌಡ ಮುಡಾಯೂರು, ಪ್ರಸನ್ನ ಗೌಡ ಪುತ್ತಿಲ, ಮಾಧವ ಗೌಡ ಬೆಳ್ತಂಗಡಿ, ದಿನೇಶ್ ಗೌಡ ಕೊಯ್ಯೂರು, ವಸಂತ ಗೌಡ ನಡ, ಮಹಿಳಾ ವೇದಿಕೆಯ ಅಧ್ಯಕ್ಷೆ ಗೀತಾ ರಾಮಣ್ಣ ಗೌಡ, ಯುವ ವೇದಿಕೆ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ, ಸ್ಪಂದನಾ ಸೇವಾ ಸಂಘದ ಸಂಚಾಲಕರಾದ ಮೋಹನ ಗೌಡ ಕೊಯ್ಯೂರು, ಶ್ರೀ ಧ.ಮಂ.BNYS ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಧರ್ಮೇಂದ್ರ ಗೌಡ ಬೆಳಾಲು, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಸದಸ್ಯರುಗಳು, ಗ್ರಾಮ ಸಮಿತಿಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನ ಮಕ್ಕಳ ಗ್ರಾಮ ಸಭೆ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ಫೆ.8: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್”-ಎ ಸ್ಟೆಪ್ ಇಂಟು ಸಕ್ಸಸ್” :ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya
error: Content is protected !!