23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮ ಪಂಚಾಯತು ಪ್ರಥಮ ಸುತ್ತಿನ ಗ್ರಾಮ ಸಭೆ

ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತು ಪ್ರಥಮ ಸುತ್ತಿನ ಡಿಜಿಟಲ್ ಗ್ರಾಮ ಸಭೆ ಕಳಿಯ ಕೃಷಿ ಪತ್ತಿನ ಸಹಕಾರಿ ಸಭಾಭವನದಲ್ಲಿ ಆ.1 ರಂದು ಜರುಗಿತು.


ಕಳಿಯ ಗ್ರಾಮ ಪಂಚಾಯತು ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್ ಕಳಿಯ ಗ್ರಾಮ ಪಂಚಾಯತು 2024-25 ರ ವಿವಿಧ ಯೋಜನೆಗಳ ಜಮಾ, ಖರ್ಚು ವಿವರ ಸಭೆ ಓದಿದರು.
2024 – 25 ರಲ್ಲಿ ಕಳಿಯ ಗ್ರಾಮ ಪಂಚಾಯತು ವ್ಯಾಪ್ತಿಯ ವಾರ್ಡ್ ಸಭೆಯಲ್ಲಿ ಕೈಗೊಳ್ಳುವ ವಿವಿಧ ಕಾಮಗಾರಿಗಳ ಬಗ್ಗೆ ವರದಿಯನ್ನು ಕಳಿಯ ಗ್ರಾಮ ಪಂಚಾಯತು ಕಾರ್ಯದರ್ಶಿ ಕುಂಇ್ಞ್ ಕೆ. ಇವರು ಸಭೆಯಲ್ಲಿ ಮಂಡಿಸಿದರು.


ಸಾಮಾಜಿಕ ಆರಣ್ಯಾಧಿಕಾರಿ ವಿದ್ಯಾ ಪಿ.ಡಿ.ಸಭೆಯ ನೋಡಲಾಧಿಕಾರಿಯಾಗಿದ್ದರು. ಕಳಿಯ ಗ್ರಾಮ ಪಂಚಾಯತು ಅಧ್ಯಕ್ಷ ದಿವಾಕರ ಎಮ್. ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷೆ ಇಂದಿರಾ ಬಿ.ಶೆಟ್ಟಿ,ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಸುಭಾಷಿಣಿ ಜನಾರ್ದನ ಗೌಡ, ಕುಸುಮ ಎನ್.ಬಂಗೇರ, ಸುಧಾಕರ ಮಜಲು ,ಅಬ್ದುಲ್ ಕರೀಂ ಕೆ.ಎಮ್. ವಿಜಯ ಕುಮಾರ್ ಕೆ, ಹರೀಶ್ ಕುಮಾರ್ ಬಿ,ಯಶೋಧರ ಶೆಟ್ಟಿ ಕೆ,.ಲತೀಫ್, ಮರೀಟಾ, ಪುಷ್ಪ ,ಮೋಹಿನಿ ಬಿ.ಗೌಡ,ಶ್ವೇತಾ ಶ್ರೀನಿವಾಸ್,ಶಕುಂತಲಾ ವಿವಿಧ ಇಲಾಖೆ ಅಧಿಕಾರಿಗಳಾದ ಅರಣ್ಯ.ಆರೋಗ್ಯ. ಕಂದಾಯ.ಕೃಷಿ. ಪೊಲೀಸ್.ಮಹಿಳಾ ಮತ್ತು ಮಕ್ಕಳ ಕಲ್ಯಾಣ. ಆರ್ಥಿಕಮತ್ತು ಸಾಕ್ಷರತಾ . ಪಶು ಸಂಗೋಪನ. ನರೇಗಾ. ಶಿಕ್ಷಣ.ಇಲಾಖೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು,ಸಂಘದ ನಿರ್ದೇಶಕಕಾದ ಬಾಲಕೃಷ್ಣ ಗೌಡ ಬಿ,ಉದಿತ್ ಕುಮಾರ್ ಬಿ,ಕುಶಾಲಪ್ಪ ಗೌಡ ಕೆ,ಕೇಶವ ಪೂಜಾರಿ ಕೆ, ಕಳಿಯ ಗ್ರಾ. ಪಂ.ಮಾಜಿ ಅಧ್ಯಕ್ಷ ಸಂಜೀವ ಬಂಗೇರ ಬಿ, ಕೇಶವ ಪೂಜಾರಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು,ಪಂಚಾಯತು ಸಿಬ್ಬಂದಿಗಳು, ವಿವಿಧ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿದರು.


ಕೃಷಿ ಇಲಾಖೆಯ ನಿವೃತ್ತ ಅಧಿಕಾರಿ ಚಿದಾನಂದ ಹೂಗಾರ್, ಅಂಚೆ ಇಲಾಖೆಯ ನಿವೃತ್ತ ಡಾಕಯ್ಯ ಇವರನ್ನು ಸನ್ಮಾನಿಸಲಾಯಿತು.
ಪಂಚಾಯತು ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್ ಸ್ವಾಗತಿಸಿ, ಸದಸ್ಯರಾದ ಪುಷ್ಪ ಧನ್ಯವಾದವಿತ್ತರು.

Related posts

ಗುರುವಾಯನಕೆರೆ: ರಸ್ತೆ ಮಧ್ಯೆ ಕೆಟ್ಟು ನಿಂತ ಸಾರಿಗೆ ಬಸ್-ಟ್ರಾಫಿಕ್ ಜಾಮ್

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಸೌಜನ್ಯ ಕೊಲೆ ಪ್ರಕರಣ: ಆ.27 ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಬೃಹತ್ ಪ್ರತಿಭಟನೆ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗಳ ಶಾಸಕರುಗಳು ಭಾಗಿ:

Suddi Udaya

ನಡ ಸ. ಪ. ಪೂ. ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ರಕ್ಷಾ ಬಂಧನ ಆಚರಣೆ

Suddi Udaya
error: Content is protected !!