September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳ ಜು.31ರಂದು ಸೇವಾ ನಿವೃತ್ತಿ ಹೊಂದಿದರು.

ಉಜಿರೆ ಗ್ರಾಮದ ನಡಿಬೆಟ್ಟು ನಿವಾಸಿ ನಿರುಪಮ ನಾರಾಯಣ ಹೊಳ್ಳ ದಂಪತಿಯ ಪ್ರಥಮ ಪುತ್ರರಾದ ಇವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಉಜಿರೆ ಶ್ರೀ ಧ.ಮ. ಶಾಲೆಯಲ್ಲಿ ಮುಗಿಸಿ, 1982 ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮಾರಾಟಗಾರರಾಗಿ ಕೆಲಸಕ್ಕೆ ಸೇರ್ಪಡೆಯಾಗಿ, ನಂತರ ಗುಮಾಸ್ತರಾಗಿ, ಮಾರಾಟ ವ್ಯವಸ್ಥಾಪಕರಾಗಿ ಸಂಘದ ಎಲ್ಲಾ ವಿಭಾಗಗಳಲ್ಲಿ ಅತ್ಯಂತ ಯಶಸ್ವಿಯಾಗಿ ಕೆಲಸವನ್ನು ನಿರ್ವಹಿಸಿರುತ್ತಾರೆ.

ನಂತರ 2013ರಿಂದ ಸಂಘದ ಲೆಕ್ಕಿಗರಾಗಿ, 2013ರಿಂದ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಪ್ರಸ್ತುತ 2021 ಮೇ10 ರಿಂದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಸಂಘದಲ್ಲಿ ಸುದೀರ್ಘ 42 ವರ್ಷಗಳ ಕಾಲ ಕಾರ್ಯನಿರ್ವಹಿಸಿದ ಸತೀಶ್ ಹೊಳ್ಳರವರು ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ

ಇವರು ಪತ್ನಿ ನಳಿನಿ ಹೊಳ್ಳ, ಪುತ್ರ ನರೇಶ್, ಪುತ್ರಿ ಶರಣ್ಯ ರೊಂದಿಗೆ ಜೀವನ ನಡೆಸುತ್ತಿದ್ದಾರೆ.

Related posts

ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ”: ಶಾಸಕ ಹರೀಶ್ ಪೂಂಜ

Suddi Udaya

ಕಾಶಿಪಟ್ಣ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಆಯ್ಕೆ

Suddi Udaya

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

Suddi Udaya

ಕಿಲ್ಲೂರು‌ ನೂತನ ಮಸ್ಜಿದ್ ಗೆ ಖಾಝಿ ಕೂರತ್ ತಂಙಳ್ ರಿಂದ ಶಿಲಾನ್ಯಾಸ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : 75 ಕೆ.ಜಿ ವಿಭಾಗದಲ್ಲಿ ಹೇಮಚಂದ್ರರಿಗೆ ಕಂಚಿನ‌ ಪದಕ

Suddi Udaya
error: Content is protected !!