24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

ಸೋಣಂದೂರು: ಪಣಕಜೆಯ ಅರ್ಕಜೆ ಎಂಬಲ್ಲಿ ಶ್ರೀಮತಿ ಕುಸುಮಾವತಿ ಎಂಬುವವರ ಮನೆಗೆ ಗುಡ್ಡ ಕುಸಿದು ಮನೆಯ ಮುಂಭಾಗ ಮಣ್ಣಿನಿಂದ ಸಂಪೂರ್ಣ ಮುಚ್ಚಿ ಹೋಗಿತ್ತು.

ವಿಷಯ ತಿಳಿದು ತಕ್ಷಣ ಸ್ಪಂದಿಸಿದ ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರು ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡು ಸಹಕರಿಸಿದರು.

ದೊಡ್ಡ ಮಟ್ಟದ ಮಣ್ಣು ಕುಸಿದು ಭಾರೀ ಪ್ರಮಾಣದ ಮಣ್ಣು ತುಂಬಿದ್ದು, ಸಂಪೂರ್ಣ ತೆರವು ಅಸಾಧ್ಯ ವಾಗಿರುತ್ತದೆ. ತಾತ್ಕಾಲಿಕವಾಗಿ ಮುಂಭಾಗದ ಮಣ್ಣು ತೆರವುಗೊಳಿಸಲಾಯಿತು.

ವಲಯ ಮೇಲ್ವಿಚಾರಕರಾದ ಶ್ರೀಮತಿ ಯಶೋಧರವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೇವಾಪ್ರತಿನಿಧಿ ಶ್ರೀಮತಿ ಜಾನಕಿ, ಮಡಂತ್ಯಾರು ವಲಯ ಶೌರ್ಯ ಸಂಯೋಜಕಿ ಶ್ರೀಮತಿ ಹರಿಣಾಕ್ಷಿ, ಘಟಕ ಪ್ರತಿನಿಧಿ ಬಾಲಕೃಷ್ಣ ಹಾರಬೆ,ಸ್ವಯಂ ಸೇವಕರಾದ ಭರತ್ ಕುಮಾರ್, ದಯಾನಂದ ಹಚ್ಚಬೆ, ಯೋಗೀಶ್ ಕೊಡ್ಲಕ್ಕೆ, ಶ್ರೀಮತಿ ಶೋಭಾ, ಬೇಬಿ ವಡ್ಡ, ಸತೀಶ್ ಆಚಾರ್ಯ ಕಾರ್ಯಾಚರಣೆಯಲ್ಲಿ ಸಹಕರಿಸಿದರು.

Related posts

ಧರೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ಸು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೃತ್ಯು

Suddi Udaya

ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ಬೆಳ್ತಂಗಡಿ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಬೆಂಗಳೂರು: ಕೊಡಗು ಮತ್ತು ದ.ಕ. ಗೌಡ ಸಮಾಜದ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ “ಕಲಾ ಐಸಿರಿ”

Suddi Udaya

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಬಂದಾರು ಗ್ರಾಮ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

Suddi Udaya
error: Content is protected !!