27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

ಸೋಣಂದೂರು: ಪಣಕಜೆಯ ಅರ್ಕಜೆ ಎಂಬಲ್ಲಿ ಶ್ರೀಮತಿ ಕುಸುಮಾವತಿ ಎಂಬುವವರ ಮನೆಗೆ ಗುಡ್ಡ ಕುಸಿದು ಮನೆಯ ಮುಂಭಾಗ ಮಣ್ಣಿನಿಂದ ಸಂಪೂರ್ಣ ಮುಚ್ಚಿ ಹೋಗಿತ್ತು.

ವಿಷಯ ತಿಳಿದು ತಕ್ಷಣ ಸ್ಪಂದಿಸಿದ ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರು ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡು ಸಹಕರಿಸಿದರು.

ದೊಡ್ಡ ಮಟ್ಟದ ಮಣ್ಣು ಕುಸಿದು ಭಾರೀ ಪ್ರಮಾಣದ ಮಣ್ಣು ತುಂಬಿದ್ದು, ಸಂಪೂರ್ಣ ತೆರವು ಅಸಾಧ್ಯ ವಾಗಿರುತ್ತದೆ. ತಾತ್ಕಾಲಿಕವಾಗಿ ಮುಂಭಾಗದ ಮಣ್ಣು ತೆರವುಗೊಳಿಸಲಾಯಿತು.

ವಲಯ ಮೇಲ್ವಿಚಾರಕರಾದ ಶ್ರೀಮತಿ ಯಶೋಧರವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೇವಾಪ್ರತಿನಿಧಿ ಶ್ರೀಮತಿ ಜಾನಕಿ, ಮಡಂತ್ಯಾರು ವಲಯ ಶೌರ್ಯ ಸಂಯೋಜಕಿ ಶ್ರೀಮತಿ ಹರಿಣಾಕ್ಷಿ, ಘಟಕ ಪ್ರತಿನಿಧಿ ಬಾಲಕೃಷ್ಣ ಹಾರಬೆ,ಸ್ವಯಂ ಸೇವಕರಾದ ಭರತ್ ಕುಮಾರ್, ದಯಾನಂದ ಹಚ್ಚಬೆ, ಯೋಗೀಶ್ ಕೊಡ್ಲಕ್ಕೆ, ಶ್ರೀಮತಿ ಶೋಭಾ, ಬೇಬಿ ವಡ್ಡ, ಸತೀಶ್ ಆಚಾರ್ಯ ಕಾರ್ಯಾಚರಣೆಯಲ್ಲಿ ಸಹಕರಿಸಿದರು.

Related posts

ವೇಣೂರು: ಉಂಬೆಟ್ಟು ಸ.ಉ.ಪ್ರಾ. ಶಾಲೆಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಧರ್ಮಸ್ಥಳ ಯೋಜನೆಯಿಂದ ರೂ ಒಂದು ಲಕ್ಷ ಅನುದಾನ

Suddi Udaya

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ ಎಸ್ಪಿಗೆ ದೂರು ನೀಡಿದ ಆಕೆಯ ತಾಯಿ

Suddi Udaya

ಕರ್ನೋಡಿ ಸ.ಉ.ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ನೋಟ್ ಬುಕ್-ಲೇಖನ ಸಾಮಗ್ರಿಗಳ ವಿತರಣೆ

Suddi Udaya
error: Content is protected !!